ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸೋದು ಸುಲಭ ಅಲ್ಲ, ಈ ಗುಟ್ಟು ಹೈಕಮಾಂಡ್ ಗೂ ಗೊತ್ತು

Krishnaveni K
ಬುಧವಾರ, 29 ಅಕ್ಟೋಬರ್ 2025 (09:32 IST)
ಬೆಂಗಳೂರು: ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಅಷ್ಟು ಸುಲಭವಲ್ಲ. ಈ ಗುಟ್ಟು ಹೈಕಮಾಂಡ್ ಗೂ ಗೊತ್ತು. ಹೀಗಾಗಿಯೇ ಹೈಕಮಾಂಡ್ ಸೈಲೆಂಟ್ ಆಗಿದೆ.

ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸಬಹುದು ಎಂಬ ಸುದ್ದಿ ಬರುತ್ತಿದ್ದ ಬೆನ್ನಲ್ಲೇ ಇನ್ನೊಂದೆಡೆ ದಲಿತ ನಾಯಕರು ತಮ್ಮ ಸಮುದಾಯದವರಿಗೆ ಮುಖ್ಯಮಂತ್ರಿ ಪಟ್ಟ ಸಿಗಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಈಗಾಗಲೇ ದಲಿತ ನಾಯಕರು ಸಭೆ ನಡೆಸಿ ದಲಿತ ಸಿಎಂ ಬೇಡಿಕೆ ಸಲ್ಲಿಸಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್ ಪಕ್ಷಕ್ಕಾಗಿ ಇಷ್ಟೆಲ್ಲಾ ನಿಷ್ಠೆಯಿಂದ ದುಡಿದಿದ್ದಾರೆ. ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುತ್ತಿದ್ದಾರೆ.

ಹೀಗಾಗಿ ಈಗ ಹೈಕಮಾಂಡ್ ಗೆ ದೊಡ್ಡ ತಲೆನೋವು ಶುರುವಾಗಿದೆ. ಒಂದು ವೇಳೆ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿಕೆಶಿಗೆ ಪಟ್ಟ ಕಟ್ಟಿದರೆ ದಲಿತ ನಾಯಕರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಸಿದ್ದರಾಮಯ್ಯನವರೇ ಮುಂದುವರಿಯುವುದಕ್ಕೆ ದಲಿತ ನಾಯಕರಿಂದಲೂ ಈಗ ವಿರೋಧ ಇಲ್ಲ. ಇದು ಸಿದ್ದರಾಮಯ್ಯಗೆ ಪ್ಲಸ್ ಪಾಯಿಂಟ್.

ಈ ಗುಟ್ಟು ಗೊತ್ತಿರುವ ಕಾರಣಕ್ಕೇ ಹೈಕಮಾಂಡ್ ಕೂಡಾ ಸೈಲೆಂಟ್ ಆಗಿದೆ. ಬಿಹಾರ ಚುನಾವಣೆ ಮುಗಿದ ಬಳಿಕವೂ ಸಿಎಂ ಬದಲಾವಣೆ ಎನ್ನುವ ಜೇನುಗೂಡಿಗೆ ಕೈ ಹಾಕುವ ಕೆಲಸ ಮಾಡುವ ಸಾಧ್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments