ಅಧಿಕಾರ ಹಂಚಿಕೆ ಬಗ್ಗೆ ಸೋನಿಯಾ ಗಾಂಧಿಯಿಂದಲೇ ಬಂತು ಮಹತ್ವದ ಸಂದೇಶ

Krishnaveni K
ಸೋಮವಾರ, 8 ಡಿಸೆಂಬರ್ 2025 (09:43 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತಣ್ಣಗಾಗಿದೆ ಎನ್ನುತ್ತಿರುವಾಗಲೇ ದೆಹಲಿಯಲ್ಲಿ ಸೋನಿಯಾ ಗಾಂಧಿಯಿಂದ ಮಹತ್ವದ ಸಂದೇಶವೊಂದು ರವಾನೆಯಾಗಿದೆ.

ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿವಾದ ತಣ್ಣಗಾಗಿದೆ ಎಂದೇ ಎಲ್ಲರೂ ಅಂದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿ ನಾವಿಬ್ಬರೂ ಚೆನ್ನಾಗಿದ್ದೇವೆ ಎಂದೆಲ್ಲಾ ಸಾರಿದ್ದರು.

ಆದರೆ ಅಧಿಕಾರ ಹಂಚಿಕೆ ಫೈಟ್ ತಣ್ಣಗಾಗಿಲ್ಲ ಎನ್ನುವುದಕ್ಕೆ ಈಗ ಸೋನಿಯಾ ಗಾಂಧಿಯಿಂದ ಬಂದ ಸಂದೇಶವೇ ಸಾಕ್ಷಿ ಎನ್ನಲಾಗುತ್ತಿದೆ. ಸದ್ಯಕ್ಕೆ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿವೇಶನ ನಡೆಯುತ್ತಿದೆ. ಸದ್ಯಕ್ಕೆ ಯಾವುದೇ ಗೊಂದಲಗಳು ಬೇಡ ಎಂದು ಹೈಕಮಾಂಡ್ ಸುಮ್ಮನಿರಲು ಸೂಚನೆ ನೀಡಿತ್ತು.

ಆದರೆ ಅಧಿವೇಶನದ ಬಳಿಕ ಮತ್ತೆ ಅಧಿಕಾರ ಹಂಚಿಕೆ ವಿಚಾರ ಚರ್ಚೆಗೆ ಬರುವುದು ಪಕ್ಕಾ ಎನ್ನಲಾಗಿದೆ. ಡಿಸೆಂಬರ್ 19 ರ ಬಳಿಕ ಚರ್ಚೆ ಮಾಡೋಣ ಎಂದು ಮಲ್ಲಿಕಾರ್ಜುನ ಖರ್ಗೆ ಮೂಲಕ ಸೋನಿಯಾ ಗಾಂಧಿ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ. ಅಧಿವೇಶನದ ಸಂದರ್ಭದಲ್ಲಿ ಯಾವುದೇ ಗೊಂದಲ ಬೇಡ ಎಂಬ ಸಂದೇಶ ಹೈಕಮಾಂಡ್ ನಿಂದ ಬಂದಿದೆ. ಈ ಕಾರಣಕ್ಕೆ ಸದ್ಯಕ್ಕೆ ಅಧಿಕಾರ ಹಂಚಿಕೆ ವಿಚಾರ ತಣ್ಣಗಾಗಿದೆ. ಅಧಿವೇಶನ ಮುಗಿದ ಬಳಿಕ ಸಿಎಂ ಮತ್ತು ಡಿಸಿಎಂರನ್ನು ದೆಹಲಿಗೆ ಕರೆಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಸಿಕ್ ನಲ್ಲಿ ಭೀಕರ ಅಪಘಾತ: ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ದುರ್ಮರಣ Video

ಇಂದು ಬಿಜೆಪಿ ಪರ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಚಾರ

ರೈಲಿನಡಿಗೆ ಬಿದ್ದು ಪ್ರಾಣ ಹೋಗಬೇಕಾಗಿದ್ದ ವ್ಯಕ್ತಿಯನ್ನು ಕೂದಳೆಯಲ್ಲಿ ಕಾಪಾಡಿದ್ದು ಯಾರು ನೋಡಿ video

ಜಮೀನು ಮಾರಿ ಪತ್ನಿಗೆ ಜೀವನಾಂಶ ನೀಡಿದ ಪತಿ ನೋವಿನ ಪ್ರತಿಕ್ರಿಯೆ ನೋಡಿ Video

ಸಿದ್ದರಾಮಣ್ಣ ಬೇಕಾದ್ದು ತಿನ್ನು, ಅದನ್ನು ಬೇಕಾದ್ರೂ ಕಟ್ ಮಾಡ್ಸು: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ Video

ಮುಂದಿನ ಸುದ್ದಿ
Show comments