ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಪೋರ್ಟ್, ಕೆಲವು ಸಚಿವರಿಗೆ ಕೊಕ್ ಕೊಡಲು ಹೈಕಮಾಂಡ್ ಆರ್ಡರ್

Krishnaveni K
ಶನಿವಾರ, 24 ಆಗಸ್ಟ್ 2024 (11:29 IST)
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಫುಲ್ ಸಪೋರ್ಟ್ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ಈಗ ರಾಜ್ಯದ ನಾಲ್ಕೈದು ಸಚಿವರಿಗೆ ಕೊಕ್ ನೀಡಲು ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಮುಡಾ ಹಗರಣದ ಬಗ್ಗೆ ಹೈಕಮಾಂಡ್ ಬೆಂಬಲ ಕೋರಲು ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರು. ಅಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವೇಳೆ ಸಿದ್ದರಾಮಯ್ಯಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಆದರೆ ರಾಜ್ಯ ಸಚಿವ ಸಂಪುಟದಲ್ಲಿ ನಾಲ್ಕೈದು ಸಚಿವರಿಗೆ ಕೊಕ್ ನೀಡಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷದ ಮೇಲಾಗಿದೆ. ಈಗ ಸಂಪುಟ ಪುನರಾಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಕೆಲವು ಸಚಿವರ ಬದಲಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆಯೂ ಚರ್ಚೆಯಾಗಿದೆ.

ಸಚಿವ ಸಂಪುಟ ಪುನರಾಚನೆ ಎಂದರೆ ಅಸಮಾಧಾನಗಳೂ ಹಿಂದೆಯೇ ಬರುತ್ತವೆ. ಸದ್ಯಕ್ಕೆ ಮುಡಾ ಹಗರಣದ ಕಾವೇರಿದ್ದು, ಇದು ಕೊಂಚ ತಣ್ಣಗಾದ ಬಳಿಕವೇ ಸಚಿವ ಸಂಪುಟ ಪುನರಾಚನೆ ಕೆಲಸಗಳು ಆರಂಭವಾಗಲಿದೆ. ಆದರೆ ಯಾವೆಲ್ಲಾ ಸಚಿವರ ತಲೆದಂಡವಾಗಲಿದೆ ಎಂಬುದು ಇನ್ನಷ್ಟೇ ಗೊತ್ತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments