Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲೂ ಸಿಎಂ ಕುರ್ಚಿಗೆ ಪೈಪೋಟಿ: ಹೈಕಮಾಂಡ್ ನಿಂದ ಎಚ್ಚರಿಕೆ

Webdunia
ಮಂಗಳವಾರ, 22 ಜೂನ್ 2021 (09:39 IST)
ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಕುರಿತಂತೆ ಭಾರೀ ವಿವಾದವಾಗಿತ್ತು. ಇದೀಗ ಕಾಂಗ್ರೆಸ್ ಸರದಿ. ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ಈಗಲೇ ಮುಂದಿನ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ.


ಶಾಸಕ ಜಮೀರ್ ಅಹಮ್ಮದ್ ಪದೇ ಪದೇ ಸಿದ್ದರಾಮಯ್ಯ ಮುಂದಿನ ಸಿಎಂ ಎನ್ನುತ್ತಿರುವುದು ಇತರ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಮೀರ್ ಅಹಮ್ಮದ್ ಗೆ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎಂದಿರಲಿಲ್ಲ. ನಿನ್ನೆ ಡಾ. ಜಿ ಪರಮೇಶ್ವರ್ ಕೂಡಾ ನನ್ನ ಬೆಂಬಲಿಗರಿಗೂ ನಾನು ಸಿಎಂ ಆಗಬೇಕೆಂಬ ಆಸೆಯಿದೆ. ಆದರೆ ಕಾಂಗ್ರೆಸ್ ನಲ್ಲಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಬಗ್ಗೆ ಯಾವುದೇ ನಾಯಕರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಡಕ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments