Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಖಭಂಗವಾಯ್ತ?

ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಖಭಂಗವಾಯ್ತ?
ದಾವಣಗೆರೆ , ಭಾನುವಾರ, 22 ಮೇ 2022 (16:27 IST)
ದಾವಣಗೆರೆ : ಮಹಾನಗರ ಪಾಲಿಕೆ ಉಪಚುನಾವಣೆಯ  28 ಹಾಗೂ 37ನೇ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.
 
ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಪಟ್ಟು ಪ್ರಚಾರ ಮಾಡಿದ್ದ ಕಾಂಗ್ರೆಸ್ನ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನಗೆ ತೀವ್ರ ಮುಖಭಂಗ ಆಗಿದೆ. ಜೆ.ಎನ್.ಶ್ರೀನಿವಾಸ್ ಹಾಗೂ ಅವರ ಪತ್ನಿ ಶ್ವೇತ ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಸಲಾಗಿತ್ತು.

28ನೇ ವಾರ್ಡಿನಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಹುಲ್ಲುಮನಿ ಗಣೇಶ್ ಅವರು 1,884 ಮತಗಳನ್ನು ಪಡೆದರೆ, ಬಿಜೆಪಿಯ ಶ್ರೀನಿವಾಸ್ 2,565 ಮತ ಪಡೆದು 681 ಮತಗಳ ಅಂತರದಿಂದ ಜಯಭೇರಿ ಬಾರಿಸಿದರು.

37ನೇ ವಾರ್ಡ್ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶ್ವೇತಾ ಶ್ರೀನಿವಾಸ್ 2,096 ಮತ ಪಡೆದರೆ, ಕಾಂಗ್ರೆಸ್ ರೇಖಾರಾಣಿ 1,303 ಮತಗಳನ್ನಷ್ಟೇ ಪಡೆದು ಸೋಲೊಪ್ಪಿಕೊಂಡರು.


Share this Story:

Follow Webdunia kannada

ಮುಂದಿನ ಸುದ್ದಿ

ಇಂಧನ ಬೆಲೆ ಕಡಿತಕ್ಕೆ ಇಮ್ರಾನ್ ಖಾನ್ ಪ್ರಶಂಸೆ