Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್‌ ಆರೋಪ ಮಾಡುತ್ತಿದೆ: ಬಿವೈ ಯಡಿಯೂರಪ್ಪ

Sampriya
ಭಾನುವಾರ, 10 ನವೆಂಬರ್ 2024 (12:11 IST)
Photo Courtesy X
ಹುಬ್ಬಳ್ಳಿ: ಕರ್ನಾಟಕ  ಮೂರು ಉಪಚುನಾವಣೆ ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಸೋಲುವ ಭೀತಿ ಕಾಡುತ್ತಿದ್ದು, ಇದರಿಂದ ಕೋವಿಡ್ ಸಂದರ್ಭ ಬಿಜೆಪಿ ಹಗರಣದ ನಡೆಸಿದೆ ಎಂದು ಆರೋಪ ಮಾಡುತ್ತಿದೆ ಎಂದು ಬಿಜೆಪಿ ಸಂದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಉಪ ಚುನಾವಣಾ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಈ ಎಲ್ಲ ಆರೋಪಗಳಿಗೆ ತಕ್ಕ ಉತ್ತರ ನೀಡುತ್ತೇವೆ. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಹೇಳಿಕೆ ನೀಡುತ್ತಾರೆ ಎಂದು ನೋಡೋಣ ಎಂದು ಹೇಳಿದರು.

'ಶಿಗ್ಗಾವಿ, ಚನ್ನಪಟ್ಟಣ, ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮಾಡಿದ್ದು, ಇನ್ನೂ ಸಂಡೂರಿನಲ್ಲಿ  ನಾಲ್ಕು-ಐದು ದಿನ ಬೀಡು ಬಿಟ್ಟು ಪ್ರಚಾರ ನಡೆಸಿದ್ದಾರೆ. ಅವರಿಗೆ ಸೋಲಿನ ಭಯ ಶುರುವಾಗಿದ್ದು, ಎಷ್ಟೇ ಪ್ರಯತ್ನ ಮಾಡಿದ್ದರೂ ಕಾಂಗ್ರೆಸ್‌ಗೆ ಸೋಲು ಖಚಿತ ಎಂದರು.

ಭ್ರಷ್ಟ‌ ಸರ್ಕಾರದ ವಿರುದ್ಧ ಜನರು ಅಕ್ರೋಶಗೊಂಡಿದ್ದಾರೆ. ಚುನಾವಣಾ ಫಲಿತಾಂಶ ಬಂದ ನಂತರ ಸಿಎಂಗೆ ಅರ್ಥ ಆಗಲಿದೆ, ಈ ಭ್ರಷ್ಟಾಚಾರ ಹಗರಣದಲ್ಲಿ ಸಿಲುಕಿದ ಕಾರಣಕ್ಕೆ ಜನ ಹೇಗೆ ತಿರುಗಿ ಬಿದ್ದಿದ್ದಾರೆ ಎನ್ನುವುದು ಎಂದರು.

ಶಿಗ್ಗಾವಿಯಲ್ಲಿ ಸಿದ್ದರಾಮಯ್ಯ ಅವರು ಮೂರು, ನಾಲ್ಕು ದಿನ ಇದ್ದು ಪ್ರಚಾರ ನಡೆಸಿದರೂ ನಿರೀಕ್ಷಿತ ಜನ ಬೆಂಬಲ ಸಿಕ್ಕಿಲ್ಲ. ಹಣ ಕೊಟ್ಟು ಜನರನ್ನು ಕರೆದರು ಅಷ್ಟೂ ಜನ ಸೇರಲಿಲ್ಲ. ಇದರಿಂದ ಸಿಎಂ ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಅಬಕಾರಿ ಇಲಾಖೆಯೊಂದರಲ್ಲಿಯೇ ಎಷ್ಟೊಂದು ಲೂಟಿ ಆಗಿದೆ ಎಂದು ಗುತ್ತುಗೆದಾರರೇ ಹೇಳುತ್ತಿದ್ದಾರೆ. ಇದೆಲ್ಲದರ ಪರಿಣಾಮ ಚುನಾವಣೆ ಫಲಿತಾಂಶದಲ್ಲಿ ಗೊತ್ತಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments