Webdunia - Bharat's app for daily news and videos

Install App

ಬಿಜೆಪಿಯಿಂದ ಅನ್ಯಾಯ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ- ಬಿ ಬಿ.ವೈ.ವಿಜಯೇಂದ್ರ

geetha
ಮಂಗಳವಾರ, 5 ಮಾರ್ಚ್ 2024 (16:00 IST)
ಬೆಳಗಾವಿ : ರೈತರಿಗೆ ನೀಡಲು ಹಣವಿಲ್ಲದಿದ್ದರು ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ನೆರವು ಘೋಷಿು ವ ಮೂಲಕ ಸಿಎಂ ತುಷ್ಟೀಕರಣ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.ರಾಜ್ಯ ಕಾಂಗ್ರೆಸ್‌ ಸರ್ಕಾರವು ಕುಂತಲ್ಲಿ ನಿಂತಲ್ಲಿ ನಮಗೆ ಕೇಂದ್ರ ಬಿಜೆಪಿ  ಸರ್ಕಾರದಿಂದ ಅನ್ಯಾಯವಾಗಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
 
 ಮಂಗಳವಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯುಪಿಎ ಸರ್ಕಾರದ ಹತ್ತು ವರ್ಷದ ಅವಧಿಯಲ್ಲಿ ಕರ್ನಾಟಕಕ್ಕೆ 65 ಸಾವಿರ ಕೋಟಿ ರೂ. ನೀಡಿದ್ದರೆ, ಪ್ರಧಾನಿ ನರೇಂದ್ರ ಮೋದಿ  ಅವಧಿಯಲ್ಲಿ 2.85 ಲಕ್ಷ ಕೋಟಿ ರೂ. ನೀಡಲಾಗಿದೆ ಎಂದರು.

ರಾಜ್ಯದಲ್ಲಿ 1800 ಕಿಮೀ ರೈಲ್ವೇ ಮಾರ್ಗ ನಿರ್ಮಾಣವಾಗುತ್ತಿದೆ. 15 ಸಾವಿರ ಕೋಟಿ ರೂ. ಹಣವನ್ನು ಇದಕ್ಕೆ ಮೀಸಲಾಗಿಡಲಾಗಿದೆ. ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರಾಜ್ಯದ 50 ಲಕ್ಷ ರೈತರು ಲಾಭ ಪಡೆದಿದ್ದಾರೆ. ಆದರೆ ಕರ್ನಾಟಕದ ರಾಜ್ಯ ಸರ್ಕಾರ ಬಡವರ ವಿರೋಧಿಯಾಗಿ, ರೈತರ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದಷ್ಟೇ ಅಲ್ಲ ದಲಿತ ವಿರೋಧಿ, ಮಹಿಳೆಯರ ವಿರೋಧಿ, ಯುವಜನರ ವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
 
ಕಳೆದ ಒಂಬತ್ತು ತಿಂಗಳಲ್ಲಿ ಯಾವುದೇ ಹೊಸ ಜನರಪ ಯೋಜನೆ ಘೋಷಿಸದೇ ಕಾಂಗ್ರೆಸ್‌ ನೂತನ ದಾಖಲೆ ನಿರ್ಮಿಸಿದೆ. ದುಷ್ಟ ಕಾಂಗ್ರೆಸ್‌ ಸರ್ಕಾರವು ಇದುವರೆಗೂ ಭ್ರಷ್ಟಾಚಾರ ಲೂಟಿ ಬಿಟ್ಟು ಬೇರೇನೂ ಮಾಡಿಲ್ಲ ಎಂದು ಬಿವೈವಿ ಕಿಡಿಕಾರಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸ್ಥಳೀಯ ನಾಯಕರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments