ಕಾಂಗ್ರೆಸ್ ಐಟಿಗೆ ಭಯ ಬೀಳ್ತಿದೆ : ಬಸವರಾಜ್ ಬೊಮ್ಮಾಯಿ

Webdunia
ಬುಧವಾರ, 5 ಏಪ್ರಿಲ್ 2023 (12:07 IST)
ಬೆಂಗಳೂರು : ಕಾಂಗ್ರೆಸ್ನವರು ಕಳ್ಳತನ ಮಾಡಿದ್ದಾರೆ. ಅದಕ್ಕೆ ಐಟಿಗೆ ಭಯ ಬೀಳುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ವಿರುದ್ದ ಸೋಲುವ ಭಯದಲ್ಲಿ ಬಿಜೆಪಿ ಐಟಿ ದಾಳಿ ಮಾಡಿಸಲು ಸಿದ್ಧವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಕಾಂಗ್ರೆಸ್ ಸೋಲುವುದು ನಿಶ್ಚಿತ. ನಮಗೆ ಗೆಲ್ಲುವ ವಿಶ್ವಾಸವಿದೆ. ಕಳ್ಳನ ಜೀವ ಉಳ್ಳುಳ್ಳಗೆ ಅಂತಾರಲ್ಲ. ಹಾಗೇ ಕಾಂಗ್ರೆಸ್ ಅವರು ಕಳ್ಳತನ ಮಾಡಿದ್ದಾರೆ. ಅದಕ್ಕೆ ಈ ರೀತಿ ಭಯ ಬೀಳುತ್ತಿದ್ದಾರೆ ಎಂದು ಕಿಡಿಕಾರಿದರು. 

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಯಾಕೆ ಮುಟ್ಟಿ ನೋಡಿಕೊಳ್ಳಬೇಕು. ಚುನಾವಣೆ ಆಯೋಗದ ಅಧೀನದಲ್ಲಿ ಎಲ್ಲವೂ ನಡೆಯುತ್ತವೆ. ಅವರೇ ಎಲ್ಲವೂ ಮಾನಿಟರ್ ಮಾಡುತ್ತಿದ್ದಾರೆ. ಈಗಾಗಲೇ ಅಧಿಕೃತವಾಗಿ ಐಟಿ ಅಧಿಕಾರಿಗಳು ಪ್ರತೀ ಜಿಲ್ಲೆಯಲ್ಲಿ ಇದ್ದಾರೆ.

ಚುನಾವಣಾ ಆಯೋಗ ಕೂಡಾ ದಾಳಿ ಮಾಡುತ್ತಿದೆ. ಎಲ್ಲಾ ಪಕ್ಷಗಳ ವಸ್ತುಗಳನ್ನು ಸೀಜ್ ಮಾಡುತ್ತಿದ್ದಾರೆ. ಚುನಾವಣಾ ಆಯೋಗ ಒಂದು ಸ್ವಾಯತ್ತತೆ ಸಂಸ್ಥೆ. ಅದರ ಕೆಲಸ ಅದು ಮಾಡುತ್ತದೆ. ಐಟಿ ದಾಳಿ ಆಗುತ್ತಿರುವುದಕ್ಕೆ ಕಾಂಗ್ರೆಸ್ಗೆ ಭಯ ಶುರುವಾಗಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments