Webdunia - Bharat's app for daily news and videos

Install App

ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್

Webdunia
ಮಂಗಳವಾರ, 11 ಅಕ್ಟೋಬರ್ 2022 (20:59 IST)
ರಾಜ್ಯದಲ್ಲಿ 2 ತಂಡವಾಗಿ ಜನ ಸಂಕಲ್ಪ ಯಾತ್ರೆ ಮಾಡ್ತಿದ್ದೀವಿ. ಈಗಾಗಲೇ ಎರಡು ಸಮುದಾಯದ ಬೇಡಿಕೆ ಈಡೇರಿಸುವ ಕೇಲಸ ಸರ್ಕಾರ ಮಾಡಿದೆ. ಇನ್ನೂ ಹತ್ತಾರು ಬೇಡಿಕೆ ಇದ್ದು ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತೆ ಎಂದು BJP ರಾಜ್ಯಾಧ್ಯಕ್ಷ ನಳೀನ್​​ಕುಮಾರ್ ಕಟೀಲ್​​ ಹೇಳಿದ್ರು. ಹಾವೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದರು, ಅಹಿಂದ ಚಳವಳಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯವನ್ನೇ ಕೊಡದೆ ಹೋದರು. ಅವರು ಸಿಎಂ ಆಗಿದ್ದಾಗ ಯಾಕೆ ಮೀಸಲಾತಿ ಕೊಡಲಿಲ್ಲ ಎಂದು ಪ್ರಶ್ನೆ ಮಾಡಿದ್ರು. ವೀರಶೈವ ಲಿಂಗಾಯತ ಸಮಾಜವನ್ನು ಒಡೆದು ಕಾಂಗ್ರೆಸ್​​​ನವರು ಆಳ್ವಿಕೆ ಮಾಡಿದ್ರು. ಇದನ್ನ ಬಿಟ್ಟು ಏನು ಒಳ್ಳೆಯ ಕೆಲಸ ಮಾಡಿದ್ದಾರೆ. ನಾವು ಒಳ್ಳೆಯ ಕೆಲಸ ಮಾಡಿದ್ದೇವೆ, ಅದರ ಕ್ರೆಡಿಟ್​​​​​ ನಾವು ತಗೊಳ್ತೀವಿ ಅಷ್ಟೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಮರು ಪ್ರಶ್ನೆ ಹಾಕಿದ್ರು. ಕೇಂದ್ರ ಸರ್ಕಾರ ಕೊಟ್ಟ ಅನ್ನಭಾಗ್ಯವನ್ನ ನಾವು ಕೊಟ್ಟಿದ್ವೇವೆ ಎಂದು ಹೇಳ್ಕೋತಾರೆ. ದೇಶದಲ್ಲಿ ಭ್ರಷ್ಟಾಚಾರ ಪ್ರಾರಂಭ ಮಾಡಿದ್ದು ಕಾಂಗ್ರೆಸ್. ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್. ಭಯೋತ್ಪಾದನೆಯ ಇನ್ನೊಂದು ಹೆಸರು ಕೂಡ ಕಾಂಗ್ರೆಸ್ ಎಂದು ಲೇವಡಿ ಮಾಡಿದ್ರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments