Select Your Language

Notifications

webdunia
webdunia
webdunia
webdunia

ಪೆನ್‌ಡ್ರೈವ್ ಪ್ರಕರಣ ಮುಂದಿಟ್ಟು ಕಾಂಗ್ರೆಸ್ ಚುನಾವಣೆ ಗೆಲ್ಲುವ ವಿಶ್ವಾಸದಲ್ಲಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Vijayendra

Sampriya

ಬೆಳಗಾವಿ , ಶನಿವಾರ, 4 ಮೇ 2024 (17:04 IST)
Photo Courtesy X
ಬೆಳಗಾವಿ: ಕಾಂಗ್ರೆಸ್ ನಾಯಕರು ಗ್ಯಾರಂಟಿ ಬಿಟ್ಟು ಕೇವಲ ಪೆನ್‌ಡ್ರೈವ್ ಪ್ರಕರಣದಿಂದಲೇ ಚುನಾವಣೆ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದಾರೆ. ಅವರಿಗೆ ನಾಡಿನ ಜನತೆ ತಕ್ಕ ಪಾಠ ಕಲಿಸಲಿದ್ದಾರೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ತಾಲ್ಲೂಕಿನ ಬಾಳೇಕುಂದ್ರಿ ಕೆ.ಎಚ್. ಗ್ರಾಮದಲ್ಲಿ ಶನಿವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,  ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ಇಂಥ ಕ್ಷುಲ್ಲಕ ರಾಜಕಾರಣ ಶೋಭೆ ತರುವುದಿಲ್ಲ. ಕಾಂಗ್ರೆಸ್‌ನವರದ್ದು ಈ ಪ್ರಕರಣ ಬಿಜೆಪಿಗೆ ಮುಳುವಾಗಲಿ ಎಂದು ಹೇಳಿದರು.

ಇನ್ನು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ತನಿಖೆ ಎದುರಿಸಿ ನೆಲದ ಕಾನೂನಿನ  ಪ್ರಕಾರ ಶಿಕ್ಷೆಯಾಗಬೇಕೆಂದರು.

ಇನ್ನೂ ಕಾಂಗ್ರೆಸ್‌ನ ಅಪಪ್ರಚಾರ ಬಗ್ಗೆ ಮತದಾರರು ತಲೆಕೆಡಿಸಿಕೊಂಡಿಲ್ಲ. ನಾವು  28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ, ರಾಹುಲ್ ಪತ್ರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ