Webdunia - Bharat's app for daily news and videos

Install App

ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಭಿನ್ನರಾಗ– ಪ್ರಹ್ಲಾದ್ ಜೋಷಿ

Webdunia
ಭಾನುವಾರ, 7 ಜನವರಿ 2018 (19:54 IST)
ಮಹಾದಾಯಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸುವ ಕಾಂಗ್ರೆಸ್‌, ಮೋದಿ ಮಧ್ಯ ಪ್ರವೇಶಿಸಿದರೆ ಭಿನ್ನರಾಗ ತಳೆಯುತ್ತಿದೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್‌ ಜೋಷಿ ಟೀಕಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಲಿ ಎಂದು ಕಾಂಗ್ರೆಸ್‌ ಈಗ ಹೇಳುತ್ತಿದೆ. ಆದರೆ, 10 ವರ್ಷ ಕಾಂಗ್ರೆಸ್‌ನವರೇ ಪ್ರಧಾನಿಯಾಗಿದ್ದರೂ ಆಗ ಸಮಸ್ಯೆ ಬಗೆಹರಿಸಲು ಇವರಿಗೆ ಏಕೆ ಆಗಲಿಲ್ಲ ಎಂದು ಪ್ರಶ್ನಿಸಿದ್ದಾರೆ.
 
ಯಡಿಯೂರಪ್ಪ ಹಾಗೂ ಅಮಿತ್‌ ಶಾ ಅವರಿಂದಾಗಿ ಗೋವಾ ಮುಖ್ಯಮಂತ್ರಿಗಳ ಮಾತಿನ ಧಾಟಿ ಬದಲಾಗಿದೆ. ಪರಿಕ್ಕರ್‌ ನಿರ್ಧಾರಕ್ಕೆ ಬದ್ಧ ಎಂದು ಅಲ್ಲಿನ ಕಾಂಗ್ರೆಸ್‌ ಅಧ್ಯಕ್ಷರು ಹೇಳಲಿ ಎಂದು ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಹೈಕಮಾಂಡ್‌ ಈ ಕಾರ್ಯ ಮಾಡಲಿ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments