Webdunia - Bharat's app for daily news and videos

Install App

ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ : ಅಶೋಕ್

Webdunia
ಭಾನುವಾರ, 24 ಏಪ್ರಿಲ್ 2022 (07:49 IST)
ಬೆಂಗಳೂರು : ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು.

ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು.

ಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ಹಿಂದೆ ಅವರದೇ ಪಕ್ಷದ ಸಿಎಂ ಬದಲಾಯಿಸಲು ರಾಮನಗರ, ಕನಕಪುರದಲ್ಲಿ ಗಲಾಟೆ ಮಾಡಿಸುತ್ತಿದ್ದರು.

ಡಿಜೆಹಳ್ಳಿ-ಕೆಜಿಹಳ್ಳಿಯಲ್ಲೂ ಅವರದೇ ಪಕ್ಷದ ಶಾಸಕನ ಮನೆಯನ್ನು, ಅವರದೇ ಪಕ್ಷದ ಮಾಜಿ ಮೇಯರ್ಗೆ ಬೆಂಕಿ ಹಾಕಿಸಿ, ಜೈಲಿಗೆ ಹೋಗಿದ್ದ ಎಂದು ಕಿಡಿಕಾರಿದರು.

ಹುಬ್ಬಳ್ಳಿ ಗಲಾಟೆಯಲ್ಲೂ ಸ್ಥಳೀಯ ಕಾಂಗ್ರೆಸ್ ಅಧ್ಯಕ್ಷನೇ ಭಾಗಿಯಾಗಿದ್ದಾನೆ. ಪಿಎಸ್ಐ ನೇಮಕಾತಿ ಹಗರಣದಲ್ಲೂ ಕಾಂಗ್ರೆಸ್ ಮುಖಂಡನೇ ಇದ್ದಾನೆ. ಹೀಗೆ ಅವರೇ ಎಲ್ಲ ಹಗರಣದಲ್ಲೂ ಭಾಗಿಯಾಗಿ ಉಳಿದವರ ಬಗ್ಗೆ ಮಾತನಾಡುತ್ತಾರೆ.

ರಾಜ್ಯದಲ್ಲಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಸರ್ವಪ್ರಯತ್ನ ಮಾಡುತ್ತಿದೆ. ವಿದೇಶಿ ಶಕ್ತಿಗಳು ಈ ಎಲ್ಲ ಘಟನೆಯಲ್ಲಿ ಭಾಗಿಯಾಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಬೇಕು ಎಂದರು.

ಗಲಭೆಕೋರರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ, ನಮ್ಮಲ್ಲೂ ಯುಪಿ, ಮಧ್ಯಪ್ರದೇಶ ಮಾದರಿ ರೂಲ್ಸ್ ಬರಬೇಕಾದ ಸ್ಥಿತಿ ಬರುತ್ತಿದೆ. ಬುಲ್ಡೋಜರ್ ರೂಲ್ಸ್ ತಂದರೆ ಮಾತ್ರ ಕೃತ್ಯಗಳನ್ನು ಮಟ್ಟ ಹಾಕಲು ಸಾಧ್ಯ.

ಗಲಭೆ ಸೃಷ್ಟಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಬುಲ್ಡೋಜರ್ ಬಳಸಿ ಆರೋಪಿಗಳ ಅಕ್ರಮ ಮನೆಗಳನ್ನು ತೆರವು ಮಾಡಬೇಕು ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿ.ಜೆ.ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

ಎಸಿ ರೂಂನಲ್ಲಿ ಕುಳಿತು ತೀರ್ಪು ಕೊಡುವ ಬದಲು....: ಕಾವೇರಿ ವಿವಾದದ ಬಗ್ಗೆ ಕುಮಾರಸ್ವಾಮಿ ಖಡಕ್ ಹೇಳಿಕೆ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು

ಆಂಜನೇಯನ ವಿಗ್ರಹಕ್ಕೆ ಹೊಡೆಯಲು ಹೋದ ವ್ಯಕ್ತಿ: ಮುಂದೆ ನಡೆದಿದ್ದು ನಿಜಕ್ಕೂ ಪವಾಡ Video

ಪ್ರಧಾನಿ ಮೋದಿ ವಿಡಿಯೋವನ್ನೇ ಬ್ಲಾಕ್ ಮಾಡ್ತೀರಾ: ಮೆಟಾ ವಿರುದ್ಧ ಸೈಬರ್ ಪೊಲೀಸರ ಖಡಕ್ ಕ್ರಮ

ಮುಂದಿನ ಸುದ್ದಿ
Show comments