ಕಾಂಗ್ರೆಸ್ ಭ್ರಷ್ಟಾಚಾರದ ಹಣ ಹಂಚುತ್ತಿದೆ ಎಂದ ಶ್ರೀರಾಮುಲು

Webdunia
ಶನಿವಾರ, 3 ನವೆಂಬರ್ 2018 (15:25 IST)
ಕಾಂಗ್ರೆಸ್ ಪಕ್ಷದ ನಾಯಕರು ನಾವು ಗೆಲ್ಲುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಹಣದಿಂದ ಗೆಲ್ಲುವ ಪ್ರಯತ್ನ ಮಾಡಿದ್ದಾರೆ. ನನ್ನ ಜಿಲ್ಲೆಯ ಜನ ಹಣ ತಿರಸ್ಕಾರ ಮಾಡಿದ್ದಾರೆ. ನಮ್ಮ ಜಿಲ್ಲೆಯ ಜನ ನಮ್ಮನ್ನು ಕೈ ಬಿಡೋಲ್ಲ ಎಂದು ಬಿ.ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಹಣ, ಕಸಿದುಕೊಂಡಿರುವ ಹಣವನ್ನು ಕಾಂಗ್ರೆಸ್ ನವರು ಇಲ್ಲಿ ಹಂಚುತ್ತಿದ್ದಾರೆ. ಆದರೆ ಶಾಂತ ಅವರು ಗೆಲ್ಲುವ ವಿಶ್ವಾಸ ಇದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಓದಿರೋರು, ನಾವು ಮನುಷ್ಯರನ್ನು ಓದಿದ್ದೇವೆ. ಇವತ್ತು ಅವರ ಮನೆ , ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ ನೀಡಿದೆ. ಇದನ್ನು ಸುದ್ದಿ ಮಾಡಿದ್ದಕ್ಕೆ ಪತ್ರಕರ್ತರು ಮೇಲೆ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ. ಪತ್ರಕರ್ತರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಅಂದ್ರೆ, ಬಳ್ಳಾರಿ ಜಿಲ್ಲೆಯ ಜನರನ್ನೂ ಬಿಡ್ತಾರಾ? ಎಂದ ಅವರು,  ಪತ್ರಕರ್ತರ ಮೇಲೆ ಈ ದ್ವೇಷ ಸರಿಯಲ್ಲ. ಅವರ ಕೆಲಸ ಮಾಡಲು ಬಿಡಬೇಕು ಎಂದರು.

ಪ್ರಧಾನಿ ಅವರ ಕೈ ಬಲಪಡಿಸಲು ಶಾಂತ ಗೆಲ್ಲಿಸ್ತಾರೆ ಜನರು. ಒಂಟಿಯಾಗಿದ್ದಿರಿ ಕಣದಲ್ಲಿ ಎಂಬ ವಿಚಾರಕ್ಕೆ ಮನುಷ್ಯ ಯಾರೋಬ್ಬರ ಮೇಲೆ‌ ಅವಲಂಬಿಸಬಾರದು. ಹೋರಾಟ ಇದ್ದಂಗೆ ನಾನು, ಹೋರಾಟ ಮಾಡಿದ್ದೇನೆ. ಜನರಿಗೆ ರಾಮುಲು ಮೇಲೆ‌ ವಿಶ್ವಾಸ ಇದೆ. ಹಾಗಾಗಿ ನಾನು ಏಕಾಂಗಿ ಅಲ್ಲ. ಚುನಾವಣೆ ನೀತಿ ಸಂಹಿತೆ ಸಂಬಂಧ ಚುನಾವಣೆ ಆಯೋಗಕ್ಕೆ ದೂರು ಕೊಡುವೆ, ಅಧಿಕಾರಿಗಳ ಜತೆ ಮಾತನಾಡುವೆ ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments