Webdunia - Bharat's app for daily news and videos

Install App

ಅಂಬೇಡ್ಕರ್ ಮದ್ಯಸೇವಿಸಿ ಸಂವಿಧಾನ ಬರೆದಿದ್ದರು ಎಂದಿದ್ದ ಕೇಜ್ರಿವಾಲ್‌: ಛಲವಾದಿ

Sampriya
ಮಂಗಳವಾರ, 24 ಡಿಸೆಂಬರ್ 2024 (18:48 IST)
Photo Courtesy X
ಬೆಂಗಳೂರು: ಈ ಸಂವಿಧಾನ ನೀಡಿದ್ದು ಇಂದಿರಾಗಾಂಧಿ, ರಾಜೀವ್ ಗಾಂಧಿ, ರಾಹುಲ್ ಗಾಂಧಿ ಎಂದು ಮಾನ್ಯ ಅನಿಲ್ ಲಾಡ್ ಅವರು ಹೇಳಿದ್ದರು. ಅದು ದೊಡ್ಡದಾಗಿ ವೈರಲ್ ಆಗಿತ್ತು. ಆಗ ಒಬ್ಬ ಕಾಂಗ್ರೆಸ್ಸಿಗರೂ ಮಾತನಾಡಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.

ವಿಧಾನಸೌಧದ ಕೊಠಡಿ ಸಂಖ್ಯೆ 155 ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಮದ್ಯ ಸೇವಿಸಿಯೇ ಸಂವಿಧಾನ ಬರೆದಿದ್ದಾರೆ (ದಾರು ಪೀಕೆ ಸಂವಿಧಾನ್ ಲಿಖಾ) ಎಂಬುದಾಗಿ ಇಂಡಿ ಒಕ್ಕೂಟದ ಕೇಜ್ರಿವಾಲ್ ಅವರು ಹೇಳಿದ್ದಾರೆ. ಇದು ವಿಡಿಯೋವಾಗಿ ಇದೆ. ಇದಕ್ಕೆ ಕಾಂಗ್ರೆಸ್ಸಿನ ಉತ್ತರ ಏನು? ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಕಾಂಗ್ರೆಸ್ ಮುಖಂಡರು ತಮ್ಮ ಅವಮಾನ ಸಹಿಸಿಕೊಳ್ಳಲಾಗದೆ, ಅಮಿತ್ ಶಾ ಅವರಿಗೆ ಅಪಮಾನ ಮಾಡುವ ಉದ್ದೇಶದಿಂದ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದ ಅವರು, ಬಾಬಾ ಸಾಹೇಬರಿಗೆ ನಾವು ಅನ್ಯಾಯ ಮಾಡಿದ್ದೇವೆ; ಚುನಾವಣೆಯಲ್ಲಿ ಸೋಲಿಸಿದ್ದೇವೆ. ಅವರು ತೀರಿಕೊಂಡಾಗ ದೆಹಲಿಯಲ್ಲಿ ಅಂತ್ಯಕ್ರಿಯೆಗೂ ಜಾಗ ಕೊಟ್ಟಿಲ್ಲ; ಈ ದೊಡ್ಡ ಅಪರಾಧ ಕಾಂಗ್ರೆಸ್ಸಿನ ಮೇಲೆ ಇದೆ ಎಂದು ಸದನದಲ್ಲಿ ಮಾನ್ಯ ರಮೇಶ್‍ಕುಮಾರ್ ಅವರೇ ಒಪ್ಪಿಕೊಂಡಿದ್ದರು ಎಂದು ಗಮನ ಸೆಳೆದರು. ಕಾಂಗ್ರೆಸ್ಸಿನ ಬೇರೆಯವರು ಇದು ಸುಳ್ಳು ಎಂದಿಲ್ಲ; ಇದನ್ನು ಒಪ್ಪಿಕೊಂಡಿದ್ದಾರೆ ಎಂದರು.

ಸಂವಿಧಾನ ಬದಲಿಸಲೇಬೇಕೆಂದು ರಾಜ್ಯದಲ್ಲಿ ಅಮರೇಗೌಡ ಬಯ್ಯಾಪುರ ಅವರು ಹೇಳಿದ ವಿಡಿಯೋ ನನ್ನ ಬಳಿ ಇದೆ. ಕಾಂಗ್ರೆಸ್ಸಿನ ಯಾರಾದರೂ ಇದನ್ನು ವಿರೋಧಿಸಿದ್ದೀರಾ ಎಂದು ಕೇಳಿದರು. ಅಂಬೇಡ್ಕರರ ಬಗ್ಗೆ ವಿಧವಿಧವಾಗಿ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಬಾಯಿ ಬಿಚ್ಚಿಲ್ಲ ಎಂದು ಟೀಕಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧವಾಗಿ ಕಾಂಗ್ರೆಸ್ ಬೆಂಬಲಿತ ಕೆಲವು ಸಂಘಟನೆಗಳು, ಕಾಂಗ್ರೆಸ್ ಪ್ರೇರೇಪಣೆಯಿಂದ ಹಾಗೂ ಕಾಂಗ್ರೆಸ್ ಕೂಡ ಬೀದಿಗಿಳಿದು ಅವರ ಹೇಳಿಕೆಯನ್ನು ವಿರೋಧಿಸುತ್ತಿವೆ ಎಂದು ಆಕ್ಷೇಪಿಸಿದರು.

ಕೇಳಿದ್ದು ಸುಳ್ಳಾಗಬಹುದು; ನೋಡಿದ್ದು ಸುಳ್ಳಾಗಬಹುದು; ನಿಧಾನಿಸಿ ಯೋಚಿಸಿದಾಗ ನಿಜವು ತಿಳಿವುದು ಎಂದು ಹಾಡು ಕೇಳಿದ್ದೇವೆ. ಇದನ್ನು ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು ಎಂದ ಅವರು ಈ ಹೋರಾಟಗಾರರಿಗೆ ಅರ್ಥವಾದ ಸತ್ಯಾಂಶ ಏನು ಎಂದು ಪ್ರಶ್ನಿಸಿದರು.

ಅಮಿತ್ ಶಾ ಅವರ ಮಾತಿನಿಂದ ಕೆಲವರಿಗೆ ಅಪಮಾನವಾಗಿದೆ. ನನಗೂ ಅದು ಗೊತ್ತಿದೆ. ಕಾಂಗ್ರೆಸ್ ಪಕ್ಷವು ಬಾಬಾಸಾಹೇಬ ಅಂಬೇಡ್ಕರರ ಜೀವಿತಾವಧಿಯಿಂದ ಇಲ್ಲಿನವರೆಗೆ ಅವರ ವಿರುದ್ಧವಾಗಿ ನಡೆದುಕೊಂಡ ವಿಷಯವನ್ನು ಸಂಪೂರ್ಣವಾಗಿ ವಿವರಿಸಿದ್ದರಿಂದ ಕಾಂಗ್ರೆಸ್ಸಿಗೆ ಮುಜುಗರವಾಗಿದೆ. ಅಪಮಾನವಾಗಿದ್ದು, ಸಹಿಸಲಾಗದ ಪರಿಸ್ಥಿತಿಗೆ ಅವರು ಬಂದು ನಿಂತಿದ್ದಾರೆ ಎಂದು ವಿಶ್ಲೇಷಿಸಿದರು.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments