Webdunia - Bharat's app for daily news and videos

Install App

ಕುಮಾರಸ್ವಾಮಿಯನ್ನು ಕರಿಯಾ ಎಂದ ಸಚಿವ ಜಮೀರ್ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್‌ ಚಿಂತನೆ

Sampriya
ಸೋಮವಾರ, 18 ನವೆಂಬರ್ 2024 (18:53 IST)
ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು 'ಕರಿಯಾ' ಎಂದು ಜನಾಂಗೀಯ ನಿಂದನೆ ಮಾಡಿದ ಸಚಿವ ಜಮೀರ್ ಅಹ್ಮದ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಯ ಗಂಭೀರವಾಗಿದ್ದರೆ ಸಮಿತಿಯು ಅವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬಹುದು ಎಂದರು..

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಎಸ್ ಯೋಗೇಶ್ವರ್ ಪರ ಪ್ರಚಾರ ಮಾಡುವ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಕರಿಯಾ ಎಂದು ಜಮೀರ್ ಅಹ್ಮದ್ ಹೇಳುವ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಅದಲ್ಲದೆ ಜಮೀರ್ ನಡವಳಿಕೆ ಬಗ್ಗೆ ಕಾಂಗ್ರೆಸ್ ನಾಯಕರು ಕೂಡಾ ಅಸಮಾಧಾನ ಹೊರಹಾಕಿದ್ದರು.

ಇದೀಗ ಹಲವು ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷಕ್ಕೆ ಹಾನಿ ಮಾಡಿದ ಮತ್ತು ಮುಜುಗರ ಉಂಟು ಮಾಡಿದ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಕ್ಷವನ್ನು ಒತ್ತಾಯಿಸುತ್ತಿದ್ದಾರೆ.

"ನಮ್ಮ ರಾಜ್ಯ ಕಾಂಗ್ರೆಸ್ ಅಧ್ಯಕ್ಷ(ಡಿ ಕೆ ಶಿವಕುಮಾರ್)ರು, ಉಪಚುನಾವಣೆಯ ನಂತರ, ಅವರ (ಖಾನ್) ಹೇಳಿಕೆ ಚುನಾವಣೆಯ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ. ಪಕ್ಷದಲ್ಲಿ ರಹಮಾನ್ ಖಾನ್ ನೇತೃತ್ವದಲ್ಲಿ ಶಿಸ್ತು ಸಮಿತಿಯಿದೆ. ಪಕ್ಷದ ಅಧ್ಯಕ್ಷರು ಈ ಕುರಿತು ಕ್ರಮಕ್ಕೆ ಶಿಸ್ತು ಸಮಿತಿಗೆ ಸೂಚಿಸಿದರೆ, ಅವರು ಖಾನ್ ಅವರನ್ನು ಕರೆದು ವಿಚಾರಿಸಬಹುದು” ಎಂದು ಪರಮೇಶ್ವರ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments