Webdunia - Bharat's app for daily news and videos

Install App

ಕಾಂಗ್ರೆಸ್​ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ- ಸಿಎಂ

Webdunia
ಭಾನುವಾರ, 30 ಅಕ್ಟೋಬರ್ 2022 (20:30 IST)
ಮುಖ್ಯಮಂತ್ರಿ ಕಚೇರಿಯಿಂದಲೇ ಪತ್ರಕರ್ತರಿಗೆ ನಗದು ರೂಪದಲ್ಲಿ ಲಂಚ ನೀಡಲಾಗಿದೆ ಎಂದು ಕಾಂಗ್ರೆಸ್​ ಪಕ್ಷವು ಮಾಡಿರುವ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್​ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್​ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಇದು ಕಾಂಗ್ರೆಸ್​​ ಟೂಲ್​ ಕಿಟ್​​ನ ಮುಂದುವರಿದ ಭಾಗ. ಕಾಂಗ್ರೆಸ್ ಅವಧಿಯಲ್ಲಿ ಐ ಫೋನ್​, ಚಿನ್ನದ ನಾಣ್ಯ ನೀಡಿದ್ದರು. ಈಗ ಆರೋಪ ಮಾಡಲು ಕಾಂಗ್ರೆಸ್​ಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪತ್ರಕರ್ತರಿಗೆ ಹಣ ನೀಡಿದ ಆರೋಪ ಹೊರಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲೋಕಾಯುಕ್ತರ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ಕಾಂಗ್ರೆಸ್​ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments