Webdunia - Bharat's app for daily news and videos

Install App

ಕಾಂಗ್ರೆಸ್ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶಕ್ಕೆ ಮೈಸೂರಿನಿಂದ ಬಸ್ ಗಳಲ್ಲಿ ಜನವೋ ಜನ

Krishnaveni K
ಗುರುವಾರ, 5 ಡಿಸೆಂಬರ್ 2024 (10:49 IST)
ಹಾಸನ: ಸಿಎಂ ಸಿದ್ದರಾಮಯ್ಯನವರ ಸಾಧನಾ ಸಮಾವೇಶ ಕಮ್ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶದಲ್ಲಿ ಭಾಗಿಯಾಗಲು ಮೈಸೂರಿನಿಂದ ಬಸ್ ಗಳಲ್ಲಿ ಜನರನ್ನು ತುಂಬಿಕೊಂಡು ಕರೆತರಲಾಗುತ್ತಿದೆ.

ನೂರಾರು ಬಸ್ ಗಳಲ್ಲಿ ಜನರನ್ನು ಸಿಎಂ ತವರು ಜಿಲ್ಲೆಯಿಂದ ಹಾಸನಕ್ಕೆ ಕರೆತರಲಾಗುತ್ತಿದೆ. ಇಂದು ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಇದಕ್ಕಾಗಿ ಬೃಹತ್ ವೇದಿಕೆ, ಕಟೌಟ್ ಗಳು ರೆಡಿಯಾಗಿದ್ದು, ಕಾಂಗ್ರೆಸ್ ನ ಬಹುತೇಕ ನಾಯಕರು ಭಾಗಿಯಾಗಲಿದ್ದಾರೆ.

ಎಐಸಿಸಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಕೂಡಾ ಇಂದಿನ ಸಮಾವೇಶಕ್ಕೆ ಬರಲಿದ್ದಾರೆ. ಸಿಎಂ ಮತ್ತು ಗೃಹಸಚಿವ ಪರಮೇಶ್ವರ್ ಈಗಾಗಲೇ ಹಾಸನದತ್ತ ಪ್ರಯಾಣ ಬೆಳೆಸಿದ್ದಾರೆ. ಸಮಾವೇಶದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು, ಬೆಂಬಲಿಗರನ್ನು ವಿಶೇಷ ಬಸ್ ಗಳಲ್ಲಿ ಕರೆತರಲಾಗುತ್ತಿದೆ.

ಈಗಾಗಲೇ ಒಂದು ಸಾವಿರ ಬಸ್ ಹೊರಟಿದ್ದು, ಇನ್ನೂ ಮುನ್ನೂರು ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು 40 ರಿಂದ 50 ಸಾವಿರ ಜನರನ್ನು ಸೇರಿಸಲಾಗುತ್ತಿದೆ. ನಮಗೆ ತೊಂದರೆ ಕೊಡುತ್ತಿರುವ ವಿರೋಧ ಪಕ್ಷಗಳಿಗೆ ದೊಡ್ಡ ಮಟ್ಟದ ಸಂದೇಶ ಕೊಡಬೇಕೆಂದು ಈ ಸಮಾವೇಶ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments