Webdunia - Bharat's app for daily news and videos

Install App

Waqf Bill: ತಿರುಪತಿಯಲ್ಲೂ ಬೇರೆ ಧರ್ಮದವರನ್ನು ನೇಮಿಸ್ತಾರಾ, ವಕ್ಫ್ ಮಂಡಳಿಯಲ್ಲಿ ಯಾಕೆ: ಬಿಕೆ ಹರಿಪ್ರಸಾದ್

Krishnaveni K
ಬುಧವಾರ, 2 ಏಪ್ರಿಲ್ 2025 (12:37 IST)
ಬೆಂಗಳೂರು: ಕೇಂದ್ರ ಸರ್ಕಾರ ಇಂದು ಮಂಡಿಸಲಿರುವ ವಕ್ಫ್ ತಿದ್ದುಪಡಿ ಬಿಲ್ ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ತಿರುಪತಿಯಲ್ಲೂ ಅನ್ಯಧರ್ಮದವರನ್ನು ನೇಮಿಸ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ.
 

ಕೇಂದ್ರ ಸರ್ಕಾರ ಈಗ ಮಂಡಿಸುತ್ತಿರುವ ವಕ್ಫ್ ತಿದ್ದುಪಡಿ ಬಿಲ್ ನಲ್ಲಿ ವಕ್ಫ್ ಮಂಡಳಿಯಲ್ಲಿ ಇಬ್ಬರು ಅನ್ಯಧರ್ಮೀಯರೂ ಇರಲಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್ ಈ ಮೊದಲಿನಿಂದಲೂ ಆಕ್ಷೇಪವೆತ್ತುತ್ತಲೇ ಇದೆ. ಮುಸ್ಲಿಮರೂ ಈ ಅಂಶದ ಬಗ್ಗೆ ತಗಾದೆ ತೆಗೆದಿದ್ದಾರೆ.

ಇದೀಗ ಇಂದು ಮಾಧ್ಯಮಗಳ ಮುಂದೆ ಮಾತನಾಡಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್, ‘ಹಾಗಿದ್ದರೆ ಕೇಂದ್ರ ಸರ್ಕಾರ ತಿರುಪತಿಯಲ್ಲೂ ಅನ್ಯಧರ್ಮೀಯದ ಅಧಿಕಾರಿಗಳನ್ನು ನೇಮಕ ಮಾಡ್ತಾರಾ? ವಕ್ಫ್ ಮಂಡಳಿ ಎನ್ನುವುದು ಮುಸ್ಲಿಮರ ವೈಯಕ್ತಿಕ ಮಂಡಳಿ. ಅಲ್ಲಿ ಅವರ ಧರ್ಮದ ಆಚರಣೆಗೆ ಅವಕಾಶ ಕೊಡಬೇಕು. ಅಲ್ಲಿ ಅನ್ಯ ಧರ್ಮೀಯರಿಗೆ ಅವಕಾಶ ನೀಡಬಾರದು. ಇದು ಅವರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿ ಮಾಡಿದಂತೆ’ ಎಂದಿದ್ದಾರೆ.

‘ದೇಶದಲ್ಲಿ ಅನೇಕ ಗಂಭೀರ ಸಮಸ್ಯೆಗಳಿವೆ. ಅದನ್ನು ಪರಿಹರಿಸುವ ಬದಲು ಜನರ ಗಮನ ಬೇರೆ ಕಡೆ ಸೆಳೆಯಲು ವಕ್ಫ್ ತಿದ್ದುಪಡಿಗೆ ಕೇಂದ್ರ ಕೈ ಹಾಕಿದೆ. ಈಗಾಗಲೇ ಮನಮೋಹನ್ ಸಿಂಗ್ ಸರ್ಕಾರವಿದ್ದಾಗಲೇ ವಕ್ಫ್ ಬಿಲ್ ಗೆ ತಿದ್ದುಪಡಿ ತಂದು ಸಾಕಷ್ಟು ಸರಳೀಕರಣಗೊಳಿಸಿದ್ದಾರೆ. ಈಗ ಮೋದಿ ಸರ್ಕಾರ ಇಂತಹದ್ದೊಂದು ಬಿಲ್ ತರುವ ಅಗತ್ಯವೇ ಇರಲಿಲ್ಲ’ ಎಂದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments