Webdunia - Bharat's app for daily news and videos

Install App

ಮತ್ತೆ ಸಿಎಂ ಸಿದ್ದರಾಮಯ್ಯರಿಗೆ ಮಂಗಳಾರತಿ ಮಾಡಿದ ಪೂಜಾರಿ

Webdunia
ಗುರುವಾರ, 15 ಡಿಸೆಂಬರ್ 2016 (12:12 IST)
ರಾಜ್ಯದ ಮಂತ್ರಿಗಳ ಕಾಮದಾಟ ಇಡಿ ದೇಶಕ್ಕೆ ಗೊತ್ತಾಗಿದೆ. ಮತ್ತಿಬ್ಬರು ಸಚಿವರ ಕರ್ಮಕಾಂಡವನ್ನು ಬಹಿರಂಗಪಡಿಸುತ್ತೇನೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಎಚ್ಚರಿಕೆ ನೀಡಿದ್ದಾರೆ. ರಹಸ್ಯ ಸಿಡಿ ಪಡೆದು ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಮಂಗಳಾರತಿ ಮಾಡಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ವೈ.ಮೇಟಿ ರಾಸಲೀಲೆ ಪ್ರಕರಣದಿಂದ ಕಾಂಗ್ರೆಸ್ ಪಕ್ಷದ ಮಾನ ಮರ್ಯಾದೆ ಹಾಳಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಏಲ್ಲಿ ಅಡಗಿ ಕುಳಿತಿದ್ದೀರಿ ಎಂದು ಕಿಡಿಕಾರಿದರು.
 
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ನಿನ್ನೆ ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments