Publish Date: Mon, 27 Aug 2018 (20:29 IST)
Updated Date: Mon, 27 Aug 2018 (20:31 IST)
ಬಿಜೆಪಿಯವರು ಬೊಗಳೆ ದಾಸಯ್ಯನವರು. ಬಿಜೆಪಿಯವರೇನು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಮತ ನೀಡಿ ಅಂತ ಕಾಂಗ್ರೆಸ್ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ಕಾಂಗ್ರೆಸ್ ನ್ನು ಗೆಲ್ಲಿಸಬೇಕೆಂದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರದ ಆಡಳಿತದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಸಂವಿಧಾನ ಪ್ರತಿ ಸುಟ್ಟ ಪ್ರಕರಣ ಪ್ರಧಾನಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು. ಬಡವರ ಹಕ್ಕನ್ನು ಕಿತ್ತುಹಾಕಲು ಬಿಜೆಪಿ ಸಂಚು ರೂಪಿಸುತ್ತಿದೆ. ವೈದಿಕ ಧರ್ಮದ ತ್ವ ರೂಪಿಸಲಿಕ್ಕೆ ಮುಂದಾಗಿದೆ. ಹೀಗಾಗಿ ಬಿಜೆಪಿಯಿಂದ ದೇಶಕ್ಕೆ ದೊಡ್ಡ ಗಂಡಾಂತರ ಕಾದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.