Select Your Language

Notifications

webdunia
webdunia
webdunia
webdunia

ಪಕ್ಷಾಂತರ ಪರ್ವ: ಕೃಷ್ಣಯ್ಯ ಶೆಟ್ಟಿ ಮಾತೃಪಕ್ಷವಾದ ಬಿಜೆಪಿಗೆ ವಾಪಸ್

ಪಕ್ಷಾಂತರ ಪರ್ವ: ಕೃಷ್ಣಯ್ಯ ಶೆಟ್ಟಿ ಮಾತೃಪಕ್ಷವಾದ ಬಿಜೆಪಿಗೆ ವಾಪಸ್
ಬೆಂಗಳೂರು , ಭಾನುವಾರ, 2 ಜುಲೈ 2017 (11:07 IST)
ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಇಂದು ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
 
ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಕೃಷ್ಣಯ್ಯ ಶೆಟ್ಟಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
 
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕೃಷ್ಣಯ್ಯ ಶೆಟ್ಟಿ ಮಾತೃಪಕ್ಷಕ್ಕೆ ಮರಳಲಿದ್ದಾರೆ.
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವರ್ತನೆಯಿಂದ ಬೇಸತ್ತು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಕೃಷ್ಣಯ್ ಶೆಟ್ಟಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ ಕರೆ