Select Your Language

Notifications

webdunia
webdunia
webdunia
webdunia

'ಕೈ' ಮುಖಂಡನ ಬರ್ಬರ ಹತ್ಯೆ!

'ಕೈ' ಮುಖಂಡನ ಬರ್ಬರ ಹತ್ಯೆ!
ದಕ್ಷಿಣ ಕನ್ನಡ , ಶುಕ್ರವಾರ, 23 ಸೆಪ್ಟಂಬರ್ 2016 (15:59 IST)
ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ನೇಲ್ಯಮಜಲು ಎನ್ನುವವರನ್ನು ದುಷ್ಕರ್ಮಿಗಳು ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ವರದಿಯಾಗಿದೆ. 
 
ಸುಳ್ಯದ ನಗರಸಭೆ ಅಧ್ಯಕ್ಷೆಯ ಪತಿ ಇಸ್ಮಾಯಿಲ್ ನೇಲ್ಯಮಜಲು ಮಸೀದಿಗೆ ತರಳಿ ಹಿಂತಿರುಗುತ್ತಿದ ಸಮಯದಲ್ಲಿ ದುಷ್ಕರ್ಮಿಗಳು ತಲವಾರನಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಸ್ಮಾಯಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಹಳೆ ದ್ವೇಶದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ನೇಲ್ಯಮಜಲು ಎನ್ನುವವರನ್ನು ಕೊಲೆಗೈದಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಈ ಹಿಂದೆ ಸುಳ್ಯದ ಗಾಂಧಿನಗರದಲ್ಲಿ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ನೇಲ್ಯಮಜಲು ಅವರ ಮೇಲೆ ಕೊಲೆ ಯತ್ನ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇಸ್ಮಾಯಿಲ್ ಅವರಿಗೆ ಭದ್ರತೆ ನೀಡಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾತಂತ್ರ್ಯ ಹೋರಾಟಗಾರರು, ಹುತಾತ್ಮರಿಗಾಗಿ ವೆಬ್‌ಸೈಟ್