Publish Date: Mon, 05 Mar 2018 (09:21 IST)
Updated Date: Mon, 05 Mar 2018 (09:27 IST)
ಬೆಂಗಳೂರು: ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ಶಾಸಕ ಅಶೋಕ್ ಖೇಣಿಗೆ ಪಕ್ಷದ ಶಾಸಕರು ಶಾಕ್ ನೀಡಿದ್ದಾರೆ. ಖೇಣಿ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಖೇಣಿ ಮೇಲೆ ನೈಸ್ ಹಗರಣ, ಭೂ ಹಗರಣ ಕಳಂಕವಿದೆ. ಹೀಗಿರುವಾಗ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಬಿಜೆಪಿ, ಜೆಡಿಎಸ್ ಗೆ ಪ್ರತಿಭಟನೆ ಮಾಡಲು ಅಸ್ತ್ರ ಸಿಕ್ಕಂತಾಗುತ್ತದೆ ಎಂದು ಬೆಂಗಳೂರಿನ ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಲು ನಿರ್ಧರಿಸಿದ್ದಾರೆ.
ಶಾಸಕ ಬೈರತಿ ಬಸವರಾಜ್, ಮುನಿರತ್ನ, ಧರ್ಮಸಿಂಗ್ ಪುತ್ರ ಡಾ. ಅಜಯ್ ಕುಮಾರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಖೇಣಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ