ಮಂಡ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಸಚಿವ ಅಂಬರೀಶ್ ಅವರು ಕಾರಣ ಎಂದು ಕಾಂಗ್ರೆಸ್ ಮುಖಂಡ ರವೀಂದ್ರ್ ಮತ್ತೆ ಕಿಡಿ ಕಾರಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ರವೀಂದ್ರ್, ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 2 ಜಿಲ್ಲಾ ಪಂಚಾಯತ್ ಮತ್ತು 7 ತಾಲೂಕು ಪಂಚಾಯತ್ ಅಭ್ಯರ್ಥಿಗಳನ್ನು ಗೆಲ್ಲಿಸಿ, ನನ್ನ ಸಾಮರ್ಥ್ಯ ಪ್ರದರ್ಶಿಸಿದ್ದೇನೆ. ಸಚಿವ ಅಂಬರೀಶ್ ಅವರು ಎಷ್ಟು ಜನ ಅಭ್ಯರ್ಥಿಯನ್ನು ಗೆಲ್ಲಿಸಿ, ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನು ಮುಂದಿನ ಚುನಾವಣೆಗಾಗಿ ಕಾಯುತ್ತಿದ್ದೇನೆ. ಅಂಬರೀಶ್ ಅವರು ಇಂದು ಕೆಂಪು ಗೂಟದ ಕಾರಿನಲ್ಲಿ ಓಡಾಡುತ್ತಿದ್ದಾರೆ ಎಂದರೆ ಅದಕ್ಕೆ ನಾನು ಒಬ್ಬ ಕಾರಣ, ನಾನು ಸಹ ಅವರಿಗೆ ಮತ ನೀಡಿದ್ದೇನೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ