Webdunia - Bharat's app for daily news and videos

Install App

ಜಾರಕಿಹೊಳಿ ಸಹೋದರರ ವಿರುದ್ಧ ಕಾಂಗ್ರೆಸ್ ಮುಖಂಡನ ವಾಗ್ದಾಳಿ

Webdunia
ಸೋಮವಾರ, 21 ಮೇ 2018 (15:47 IST)
ಜಿಲ್ಲೆಯಲ್ಲಿ 12 ಸ್ಥಾನ ಗೆಲ್ಲಿಸುವುದಾಗಿ ಹೇಳಿಕೊಂಡಿದ್ದ ಜಾರಕಿಹೊಳಿ ಸಹೋದರರಿಗೆ ಒಬ್ಬನೇ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಲು ಆಗಲಿಲ್ಲ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ವ್ಯಂಗ್ಯವಾಡಿದರು. 
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಗೆದ್ದ ಎಲ್ಲ ಕಾಂಗ್ರೆಸ್ ಅಭ್ಯರ್ಥಿಗಳು ತಮ್ಮ ಸ್ವಶಕ್ತಿ ಮತ್ತು ವರ್ಚಸ್ಸಿನಿಂದ ಗೆದ್ದಿದ್ದಾರೆ. ಜಾರಕಿಹೊಳಿ ಸಹೋದರರು ತಾವೇ ಸ್ವತಃ ಗೆಲ್ಲುವುದೇ ಕಷ್ಟವಾಗಿತ್ತು ಎಂದರು.
 
ಜಿಲ್ಲೆಯಲ್ಲಿ ಪ್ರತಿಭಾನ್ವಿತ ಮಹಿಳೆಯರಾದ ಲಕ್ಷ್ಮೀ ಹೆಬ್ಬಾಳಕರ- ಡಾ. ಅಂಜಲಿ ನಿಂಬಾಳಕರ ಇಲ್ಲವೇ ಗಣೇಶ ಹುಕ್ಕೇರಿ ಅವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದರು. ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಜಿಲ್ಲೆಯ ಉಸ್ತುವಾರಿ ಕೊಡಬೇಕು ಎಂದರು. ಜಾರಕಿಹೊಳಿ ಸಹೋದರರಿಗೆ ಯಾವುದೇ ಕಾರಣಕ್ಕೂ ರಾಜ್ಯ ಸಂಪುಟದಲ್ಲಿ ಸ್ಥಾನ ಕೊಡಬಾರದು ಎಂದು ಮುನವಳ್ಳಿ ಆಗ್ರಹಿಸಿದರು. 
 
ಸಾಮಾಜಿಕ ಸೇವೆಯ ಬದ್ದತೆ ಜಾರಕಿಹೊಳಿ ಸಹೋದರರಿಗೆ ಇಲ್ಲವೇ ಇಲ್ಲ ಅವರು ಶುದ್ಧ ವ್ಯಾಪಾರಿಗಳು.ಈ ಬಾರಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಗರ್ವದಿಂದ ಮೆರೆಯುತ್ತಿದ್ದ ಘಟಾನುಘಟಿಗಳನ್ನು ಸೋಲಿಸಿ ಮೂಲೆ ಸೇರಿಸಿದ್ದಾರೆ. ಸುಮಾರು 8 ಕಾಂಗ್ರೆಸ್ ಎಂಎಲ್ ಎ ಗಳು ಗೆಲ್ಲದಂತೆ ನೋಡಿಕೊಂಡಿದ್ದು ಇದೇ ಅಸೂಯೆ ಪ್ರವೃತ್ತಿಯ ಜಾರಕಿಹೊಳಿ ಸಹೋದರರು ಎಂದರು. ಹೊರ ಜಿಲ್ಲೆಯ ಪಿಸಿಸಿ ಮೆಂಬರಗಳನ್ನು ಹಿಂಪಡೆಯಬೇಕು. ಮೂಲ ಕಾಂಗ್ರೆಸ್ಸಿಗ ಡಿ. ಕೆ. ಶಿವಕುಮಾರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಮನವಳ್ಳಿ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments