Webdunia - Bharat's app for daily news and videos

Install App

ಕರಾವಳಿಯಲ್ಲಿ ಕಾಂಗ್ರೆಸ್ ಗೆ ಬಲ ತುಂಬಲು ಹೊಸ ಪ್ರಯತ್ನ

Webdunia
ಮಂಗಳವಾರ, 10 ಜುಲೈ 2018 (11:13 IST)
ಮಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಸೋತು ಸುಣ್ಣವಾದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ.

ಕರಾವಳಿ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಅಲ್ಲಿನ ನಾಯಕರಿಗೆ ಪ್ರಮುಖ ಹುದ್ದೆ ನೀಡಿ ಆ ಭಾಗಕ್ಕೆ ಹೆಚ್ಚು ಒತ್ತು ಕೊಡಲು ನಿರ್ಧರಿಸಿದ್ದಾರೆ. ಕೆಪಿಸಿಸಿಯಲ್ಲಿ ಪ್ರಮುಖ ಹುದ್ದೆಗೆ ಕಾಪು ಮೂಲದ ವಿನಯ್ ಕುಮಾರ್ ಸೊರಕೆಯವರನ್ನು ಆಯ್ಕೆ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ.

ಈ ಮೂಲಕ ಕರಾವಳಿಯಲ್ಲಿ ಮತ್ತೆ ಕೈ ಪಕ್ಷದ ಬಲವರ್ಧನೆಗೆ ಮುಂದಾಗಿದ್ದಾರೆ. ಕೆಪಿಸಿಸಿಯಲ್ಲಿ ಕಾರ್ಯಾಧ್ಯಕ್ಷ ಹುದ್ದೆ ಆಯ್ಕೆ ನಡೆಯಬೇಕಿದ್ದು, ಈ ಸ್ಥಾನಕ್ಕೆ ಸತೀಶ್ ಜಾರಕಿ ಹೊಳಿ ಕೂಡಾ ಪ್ರಮುಖ ಆಕಾಂಕ್ಷಿ ಎನ್ನಲಾಗಿದೆ. ಆದರೆ ಕರಾವಳಿಯಲ್ಲಿ ಕಾಂಗ್ರೆಸ್ ಬಲವರ್ಧನೆಗೆ ವಿನಯ್ ಕುಮಾರ್ ಸೊರಕೆಗೆ ಈ ಜವಾಬ್ಧಾರಿ ನೀಡಲು ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments