Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪರಿಗೆ ಜೀವ ಬೆದರಿಕೆ

ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪರಿಗೆ ಜೀವ ಬೆದರಿಕೆ
ಬೆಂಗಳೂರು , ಗುರುವಾರ, 22 ಡಿಸೆಂಬರ್ 2016 (15:22 IST)
ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಅವರಿಗೆ ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಜೀವ ಬೆದರಿಕೆ ಬಂದಿವೆ ಎಂದು ಮೂಲಗಳು ತಿಳಿಸಿವೆ.
 
ಅತ್ಯಾಚಾರ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷರಾದ ವಿ.ಎಸ್.ಉಗ್ರಪ್ಪ, ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.
 
ಶಾಸಕನಾದ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆಯೆಂದರೆ ಜನಸಾಮಾನ್ಯರ ಪಾಡೇನು ಎಂದು ಆಕ್ರೋಶ ವ್ಯಕ್ತಪಡಿಸಿದ ಉಗ್ರಪ್ಪ, ಪೊಲೀಸರು ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಘವೇಶರ್ ಶ್ರೀಗಳ ವಿರುದ್ಧದ ಪ್ರಕರಣದ ಕುರಿತು ತ್ವರಿತ ತನಿಖೆಯನ್ನು ನಡೆಸುವಂತೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಶ್ರೀಗಳ ಬೆಂಬಲಿಗರೆ ಫೇಸ್‌ಬುಕ್‌ನಲ್ಲಿ ಬೆದರಿಕೆ ಸಂದೇಶಗಳನ್ನು ರವಾನಿಸುತ್ತಿದ್ದಾರೆ ಎಂದು ಮಹಿಳಾ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಿಗರಿಗೆ ಉದ್ಯೋಗದಲ್ಲಿ ಶೇ.100 ರಷ್ಟು ಮೀಸಲಾತಿ: ಸಿಎಂ ಸಿದ್ದರಾಮಯ್ಯ