Webdunia - Bharat's app for daily news and videos

Install App

ಬಿಜೆಪಿಯನ್ನು ಮುಗಿಸ್ತೇನೆ ಎಂದಿದ್ದ ಯಡ್ಡಿ, ಇದೀಗ ಅಧಿಕಾರಕ್ಕೆ ತರುವುದು ಗುರಿ ಎನ್ನುತ್ತಿದ್ದಾರೆ: ಉಗ್ರಪ್ಪ ಲೇವಡಿ

Webdunia
ಸೋಮವಾರ, 24 ಅಕ್ಟೋಬರ್ 2016 (15:10 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಎಂಎಲ್‌ಸಿ ಉಗ್ರಪ್ಪ, ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದ ಹಾಗೇ ಆಗ್ತೀದೆ. ಬಿಎಸ್‌ವೈಗೆ ಅರಳು ಮರಳು ಶುರುವಾಗಿದೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
 
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿಎಸ್‌ವೈ, ಕೆಜೆಪಿ ಸ್ಥಾಪನೆ ಬಳಿಕ ಬಿಜೆಪಿ ಮುಗಿಸುವುದೇ ನನ್ನ ಗುರಿ ಎಂದು ಹೇಳಿದ್ದರು. ಆದರೆ, ಇದೀಗ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ ಎನ್ನುತ್ತಿದ್ದಾರೆ ಎಂದರು. 
 
ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಜ್ಯದ ಜನತೆಗೆ ಏನು ಬೇಕಾದ್ರೂ ಕೋಡುತ್ತೇವೆ ಎಂದು ನಿನ್ನೆ ನಡೆದ ಸಮಾವೇಶದಲ್ಲಿ ಬಿಎಸ್‌ವೈ ಭರವಸೆ ನೀಡಿದ್ದರು. ಆದರೆ, ಸಮಾವೇಶಕ್ಕೆ ಆಗಮಿಸಿದ್ದ ಜನರಿಗೆ ಊಟವೇ ನೀಡಿಲ್ಲ ಎಂದು ವ್ಯಂಗ್ಯವಾಡಿದರು. 
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಈ ಮೂಲಕ ಬಿಜೆಪಿ ಮತ್ತೆ ಆಪರೇಷನ್ ಕಮಲ ಮಾಡಲು ಹೊರಟಿದೆ. ಪ್ರಜಾಪುಭುತ್ವದಲ್ಲಿ ಬಿಜೆಪಿ ನಾಯಕರು ನಂಬಿಕೆ ಕಳೆದುಕೊಂಡಿದ್ದಾರೆ. ಹೀಗಾಗಿ ವಾಮಾಮರ್ಗದ ಮೂಲಕ ಅಧಿಕಾರದ ಗದ್ದುಗೆ ಹಿಡಿಯಲು ಪ್ರಯತ್ನಿಸುತ್ತಿದೆ ಎಂದು ಎಂಎಲ್‌ಸಿ ಉಗ್ರಪ್ಪ ದೂರಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments