Webdunia - Bharat's app for daily news and videos

Install App

ಮೋದಿ ಹಣ ಕಳುಹಿದ್ದಾರೆಂದು ಸ್ಲಂ ಮಹಿಳೆಯರನ್ನು ಪ್ರತಿಭಟನೆಗೆ ಕರೆತಂದ ಕಾಂಗ್ರೆಸ್ಸಿಗರು

Webdunia
ಬುಧವಾರ, 23 ನವೆಂಬರ್ 2016 (17:46 IST)
ಪ್ರಧಾನಿ ನರೇಂದ್ರ ಮೋದಿ ನಿಮಗಾಗಿ ಹಣ ಕಳುಹಿದ್ದಾರೆ ಬನ್ನಿ ಎಂದು ಸ್ಲಂ ಮಹಿಳೆಯರನ್ನು ಮೋದಿ ವಿರುದ್ಧದ ಪ್ರತಿಭಟನೆಗೆ ಕರೆದುಕೊಂಡು ಹೋಗಿ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ  ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಮುಖಭಂಗ ಎದುರಿಸಿದ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ.
 
ಕಪ್ಪು ಹಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ದಿಟ್ಟ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಲು ಸ್ಲಂ ಮಹಿಳೆಯರಿಗೆ ಹಣ ನೀಡುವುದಾಗಿ ಪ್ರತಿಭಟನೆಗೆ ಕರೆತಂದಿದ್ದರು. ಅದರಂತೆ ಇಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪ್ರತಿಭಟನೆಯು ನಡೆಯಿತು.
 
ಪ್ರತಿಭಟನೆ ಮುಗಿದ ಬಳಿಕ ಸ್ಲಂ ಮಹಿಳೆಯರಿಗೆ 100, 200 ರೂಪಾಯಿ ಹಣವನ್ನು ನೀಡಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದರು. ಆದರೆ, ಸ್ಲಂ ಮಹಿಳೆಯರು ಈ ಪಾಪದ ಹಣ ಪಡೆಯಲು ನಿರಾಕರಿಸಿದ್ದು, ಪ್ರಧಾನಿ ಮೋದಿ ಅವರು ಕಳುಹಿಸಿರುವ ಹಣವನ್ನೇ ನೀಡಿ ಎಂದು ಪಟ್ಟು ಹಿಡಿದಿದ್ದು ಗಮನಾರ್ಹ ಸಂಗತಿಯಾಗಿದೆ.
 
ಮೋದಿ ಮಾಡಿದ್ದು ಒಳ್ಳೆಯದ್ದು, ಲಕ್ಷ್ಮೀ ಹೆಬ್ಬಾಳಕರಿಗೆ ತೀವ್ರ ಮುಖಭಂಗ.....
 
ಕಪ್ಪು ಹಣ ತಡೆಗಟ್ಟಲು ಪ್ರಧಾನಿ ಮೋದಿ ಸಾಹೇಬ್ರೂ ಒಳ್ಳೆಯ ನಿರ್ಧಾರವನ್ನೆ ಕೈಗೊಂಡಿದ್ದಾರೆ ಎಂದು ಸ್ಲಂ ಮಹಿಳೆಯರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆಯೇ ಹೇಳಿ, ಮೋದಿ ಅವರಿಗೆ ಜೈಕಾರ ಕೂಗಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಮುಜುಗುರ ಉಂಟಾದ ಸನ್ನಿವೇಶವೂ ನಡೆಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2003 ರಲ್ಲಿ ನಡೆದಿದ್ದ ಟೆಕಿ ಗಿರೀಶ್ ಹತ್ಯೆ ಕೇಸ್: ಭಾವೀ ಪತಿ ಹತ್ಯೆಗೈದಿದ್ದ ಶುಭಾ ಕೇಸ್ ಗೆ ಟ್ವಿಸ್ಟ್

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಮುಂದಿನ ಸುದ್ದಿ
Show comments