Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮುಖಂಡರು ದಾರಿ ತಪ್ಪಿಸಲು ಸಂಚು ರೂಪಿಸುತ್ತಿದ್ದಾರೆ: ಬಿಎಸ್‌ವೈ

ಕಾಂಗ್ರೆಸ್ ಮುಖಂಡರು ದಾರಿ ತಪ್ಪಿಸಲು ಸಂಚು ರೂಪಿಸುತ್ತಿದ್ದಾರೆ: ಬಿಎಸ್‌ವೈ
ಬೆಂಗಳೂರು , ಸೋಮವಾರ, 13 ಫೆಬ್ರವರಿ 2017 (19:52 IST)
ಕಾಂಗ್ರೆಸ್ ಮುಖಂಡರು ದಾರಿ ತಪ್ಪಿಸಲು ತಿರುಚಿದ ಸಿಡಿಯನ್ನು ಬಿಡುಗಡೆಗೊಳಿಸಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಆರೋಪ ಮಾಡಿದ್ದಾರೆ.
 
 ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಪ್ಪ ನೀಡಿದ ಹೇಳಿಕೆಗೆ ನಾವು ಬದ್ಧರಾಗಿದ್ದೇವೆ. ಡೈರಿಯಲ್ಲಿರೋ ವಿಷಯ ಸುಳ್ಳೆಂದು ಸಾಬೀತಾದರೆ ನಾನು ರಾಜಕೀಯ ಸನ್ಯಾಸ ಪಡೆಯುತ್ತೇನೆ ಎಂದು ಘೋಷಿಸಿದರು.
 
ಒಂದು ವೇಳೆ, ಸಿಎಂ ಸಿದ್ದರಾಮಯ್ಯ ಹೆಸರು ಡೈರಿಯಲ್ಲಿರುವುದೇ ಆದಲ್ಲಿ ಅವರು ರಾಜಕೀಯ ಸನ್ಯಾಸ ಪಡೆಯಬೇಕು ಎಂದು ಸವಾಲ್ ಹಾಕಿದರು.
 
ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಮಾಡಿದ ಸಂಭಾಷಣೆಯ ವಿಡಿಯೋ ಬಿಡುಗಡೆಯಾಗಿ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು: ಗೋವಿಂದರಾಜು