Select Your Language

Notifications

webdunia
webdunia
webdunia
webdunia

‘ನಾನು ತಪ್ಪು ಮಾಡಿಲ್ಲ, ನಾನು ರಾಜೀನಾಮೆ ಕೊಡಲ್ಲ’

‘ನಾನು ತಪ್ಪು ಮಾಡಿಲ್ಲ, ನಾನು ರಾಜೀನಾಮೆ ಕೊಡಲ್ಲ’
bangalore , ಮಂಗಳವಾರ, 12 ಏಪ್ರಿಲ್ 2022 (19:37 IST)
ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ, ಪ್ರಕರಣ ಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ, ಕೋರ್ಟ್ ತೀರ್ಪು ಹೊರಬರಲಿ, ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 40% ಆರೋಪದ ವಿರುದ್ಧ ನಾಣು ಸಂತೋಷ್​​ ವಿರುದ್ಧ ಕೋರ್ಟ್​ನಲ್ಲಿ ಕೇಸ್​ ದಾಖಲಿಸಿದ್ದೆ. ಕೋರ್ಟ್‍ನಿಂದ ನೋಟಿಸ್ ಹೋದ ನಂತರ ಭೀತಿಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು. ಸಂತೋಷ್ ಆತ್ಮಹತ್ಯೆಗೂ, ನನಗೂ ಏನೂ ಸಂಬಂಧವಿಲ್ಲ. ಸಂತೋಷ್ ಅವರನ್ನು ನಾನು ನೋಡಿಲ್ಲ. ಅವರು ಯಾರೂ ಎಂದೇ ನನಗೆ ಗೊತ್ತಿಲ್ಲ ಎಂದು ಹೇಳಿದರು. ಉಡುಪಿಯ ಶಾಂಭವಿ ಲಾಡ್ಜ್​​​ನಲ್ಲಿ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬಹಿರಂಗವಾಗುತ್ತಿದ್ದಂತೆ ಅವರು ವಾಟ್ಸ್​​​ಆ್ಯಪ್​​​​ನಲ್ಲಿ ಕಳುಹಿಸಿದ್ದ ಸಂದೇಶ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲಿ ನನ್ನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಶ್ ನಟನೆಯ ‘ಕೆಜಿಎಫ್ 2’ ಏಪ್ರಿಲ್ 14ರಂದು ವಿಶ್ವಾದ್ಯಂತ ರಿಲೀಸ್