Webdunia - Bharat's app for daily news and videos

Install App

ಆರ್.ವಿ ದೇಶಪಾಂಡೆಯನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ಯಾಕೆ?

Webdunia
ಬುಧವಾರ, 9 ಜನವರಿ 2019 (07:57 IST)
ಬಾಗಲಕೋಟೆ : ಕಾಂಗ್ರೆಸ್ ನ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು ಬಿಜೆಪಿಯವರ ಜೊತೆ ಊಟ ಮಾಡಿದ್ದಕ್ಕೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.


ಬರ ಅಧ್ಯಯನ ಮಾಡಲು ಕಂದಾಯ ಸಚಿವ ಆರ್.ವಿ‌.ದೇಶಪಾಂಡೆ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಬೀಳಗಿ ತಾಲೂಕಿಗೆ ಭೇಟಿ ನೀಡಿತ್ತು. ಈ ವೇಳೆ ಸಚಿವರು ಮತ್ತು ಬರ ಅಧ್ಯಯನ ತಂಡ ಬಿಜೆಪಿ ಪಕ್ಷದ ಮಾಜಿ ಸಚಿವ ಮುರುಗೇಶ ನಿರಾಣಿ ಮನೆಯಲ್ಲಿ ಊಟ ಮಾಡಿದ್ದಾರೆ.


ಇದಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಬಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದವರಿದ್ದರೂ ಎಲ್ಲರನ್ನು ಕಡೆಗಣಿಸಿ ಬಿಜೆಪಿ ಸದಸ್ಯರ ಜೊತೆ ಊಟ ಮಾಡಿದ್ದಾರೆ. ಇದು ಪಕ್ಷಕ್ಕೆ ಮಾಡಿದ ಅವಮಾನ. ಪಕ್ಷದ ಹಿರಿಯ ನಾಯಕನಾಗಿ ಬಿಜೆಪಿ ಜೊತೆ ಹೋಗಿದ್ದು ತಪ್ಪು. ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments