Select Your Language

Notifications

webdunia
webdunia
webdunia
webdunia

ಯತ್ನಾಳ್ ವಿರುದ್ಧ ಸದನದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್ ನಾಯಕರು

ಯತ್ನಾಳ್ ವಿರುದ್ಧ ಸದನದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್ ನಾಯಕರು
ಬೆಂಗಳೂರು , ಶನಿವಾರ, 29 ಫೆಬ್ರವರಿ 2020 (10:35 IST)
ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಸವನಗೌಡ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ್ ವಿರುದ್ಧ ಸದನದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸುತ್ತಿದ್ದಾರೆ.


ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಸವನಗೌಡ ಯತ್ನಾಳ್  ಅವಹೇಳನಕಾರಿ ಹೇಳಿಕೆ ನೀಡಿದ್ದು ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಕ್ಷಮೆ ಕೇಳದಿದ್ದರೆ ಸದನ ನಡೆಸಲು ಬಿಡಲ್ಲವೆಂದು ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದ್ದರು.


ಆದರೆ ಇದಕ್ಕೆ ಪ್ರತಿ ಸವಾಲು ಹಾಕಿದ ಬಿಜೆಪಿ ನಾಯಕರು, ಅದು ಹೇಗೆ ಸದನ ನಡೆಸಲು ಬಿಡಲ್ಲವೋ ನೋಡೋಣ ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಸಿಎಲ್ ಪಿ ಸಭೆಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆಸಿ, ಬಳಿಕ ಅಧಿವೇಶನದಲ್ಲಿ ಭಾಗಿಯಾಗಲು ಕಾಂಗ್ರೆಸ್ ನಾಯಕರು ನಿರ್ಧಾರ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಏತನೀರಾವರಿ ವಿಚಾರದ ಕುರಿತು ಶಾಸಕ ಮತ್ತು ಗ್ರಾಮಸ್ಥರ ನಡುವೆ ವಾಗ್ದಾಳಿ