Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷಕ್ಕೆ ಸೋಲಾದಲ್ಲಿ ಕಾಂಗ್ರೆಸ್ಸಿಗರೇ ಕಾರಣ: ಸುರೇಶ್ ಗೌಡ

ಕಾಂಗ್ರೆಸ್ ಪಕ್ಷಕ್ಕೆ ಸೋಲಾದಲ್ಲಿ ಕಾಂಗ್ರೆಸ್ಸಿಗರೇ ಕಾರಣ: ಸುರೇಶ್ ಗೌಡ
ಬೆಂಗಳೂರು , ಶನಿವಾರ, 4 ಮಾರ್ಚ್ 2017 (14:39 IST)
ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಶಕ್ತಿ ವಿಪಕ್ಷಗಳಿಗಿಲ್ಲ. ಒಂದು ವೇಳೆ, ಕಾಂಗ್ರೆಸ್ ಪಕ್ಷಕ್ಕೆ ಸೋಲಾದಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಸಚಿವರುಗಳೇ ಮೂಲ ಕಾರಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ. 
 
ಹಣ ಪಡೆದು ಮತಹಾಕಿ ದ್ರೋಹವೆಸಗಿದ ಜೆಡಿಎಸ್ ಪಕ್ಷದ ಬಂಡಾಯ ಶಾಸಕರಿಗೆ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರಾಜ್ಯದ ಜನತೆ ಹಣ ಪಡೆದು ಮತ ಹಾಕಿದ ಬಂಡಾಯ ಶಾಸಕರಿಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ. ದೇವೇಗೌಡರೇ ಬಂದರೂ ಕೂಡಾ ಬಂಡಾಯ ಶಾಸಕರನ್ನು ಗೆಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ನಾಗಮಂಗಲ ಕ್ಷೇತ್ರದ ಶಾಸಕ ಚಲುವರಾಯ ಸ್ವಾಮಿ ಮುಂದಿನ ಚುನಾವಣೆಯಲ್ಲಿ ಜಯಗಳಿಸಿದಲ್ಲಿ ರಾಜಕೀಯ ತ್ಯಜಿಸುತ್ತೇನೆ. ಕಳೆದ 20 ವರ್ಷಗಳಿಂದ ಚಲುವರಾಯಸ್ವಾಮಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ದಾರೆ. ಅಂತಹ ವ್ಯಕ್ತಿಗೆ ಕಾಂಗ್ರೆಸ್ ಪಕ್ಷ ನೀಡಲು ನಿರ್ಧರಿಸಿದೆ. ಇವರಿಗೆ ಮಾನ, ಮರ್ಯಾದೆ ಇದೆಯಾ? ಎಂದು ಗುಡುಗಿದ್ದಾರೆ.
 
ಕಳೆದ ಚುನಾವಣೆಯಲ್ಲಿ ಅಲ್ಪಮತಗಳ ಅಂತರದಿಂದ ಸೋಲನುಭವಿಸಿದ ನಾಯಕರಿಗೆ ಟಿಕೆಟ್ ನೀಡುವುದಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಹುಲ್ ಗಾಂಧಿ ಬಳಿ ತೆರಳಿ ಟಿಕೆಟ್‌ ನೀಡುವಂತೆ ಮನವಿ ಮಾಡುವುದಾಗಿ ಹಿರಿಯ ಕಾಂಗ್ರೆಸ್ ಮುಖಂಡ ಸುರೇಶ್ ಗೌಡ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ಸರಕಾರ ವಿಫಲ: ದೇವೇಗೌಡ