Webdunia - Bharat's app for daily news and videos

Install App

ಜಯಮಾಲಾ ಹೇಳಿಕೆಗೆ ತಿರುಗೇಟು ನೀಡಿದ ಕೈ ಮುಖಂಡರು!

Webdunia
ಮಂಗಳವಾರ, 6 ನವೆಂಬರ್ 2018 (13:54 IST)
ಸಚಿವ ಹೆಚ್.ಡಿ.ರೇವಣ್ಣ ಸಾಯುವತನಕ ಶಾಸಕ ಎಂದು ಹಾಡಿ ಹೊಗಳಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಹೇಳಿಕೆಗೆ ಸ್ವಪಕ್ಷದವರಿಂದಲೇ ಟೀಕೆಗಳು ಕೇಳಿಬರುತ್ತಿವೆ.

ಶ್ರವಣಬೆಳಗೊಳದಲ್ಲಿ ನಡೆದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಗೆ ರಾಷ್ಟ್ರೀಯ ಮಹಾವೀರ ಶಾಂತಿ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವೆ ಜಯಮಾಲಾ, ಹಾಸನ ಜಿಲ್ಲೆಯ ಶುಚಿತ್ವ ನೋಡಿದರೆ ಸಚಿವ ರೇವಣ್ಣ ಅವರ ಕೆಲಸ ಗೊತ್ತಾಗುತ್ತದೆ. ಅವರು ಸಾಯುವತನಕ ಶಾಸಕರಾಗಿ ಇರಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಅದು ಸ್ವಪಕ್ಷದವರಿಂದಲೇ ವಿವಾದಕ್ಕೆ ಕಾರಣವಾಗಿದೆ.

ಹಾಸನ ಜಿಲ್ಲಾ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎ. ಮಂಜು ಮಾತನಾಡಿದ್ದು, ಅನುಭವವಿಲ್ಲದವರಿಗೆ ಅಧಿಕಾರ ಸಿಕ್ಕರೆ ಹೀಗೆ ಆಗುತ್ತದೆ. ಓಲೈಕೆ ಮಾಡುವುದಕ್ಕಾಗಿ ಜಯಮಾಲಾ ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸಾಯುವ ತನಕ ನಟಿಯಾಗುತ್ತೇನೆ ಎಂದು ಜಯಮಾಲಾ ಅಂದುಕೊಂಡಿದ್ದರು. ಆದರೆ ಜನರು ಅವರ ಸಿನಿಮಾ ನೋಡುವುದಿಲ್ಲ ಎಂಬ ಸತ್ಯ ಅರಿವಾದಾಗ ರಾಜಕೀಯಕ್ಕೆ ಬಂದಿದ್ದಾರೆ. ಸಿನಿಮಾದಲ್ಲಿ ದುಡ್ಡು ಮಾಡಿರುವ ಅವರು, ರಾಜಕೀಯದಲ್ಲಿ ಓಲೈಕೆಯ ರಾಜಕಾರಣ ಮಾಡುತ್ತಿದ್ದಾರೆ. ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments