Webdunia - Bharat's app for daily news and videos

Install App

ಜಯಮಾಲಾ ಹೇಳಿಕೆಗೆ ತಿರುಗೇಟು ನೀಡಿದ ಕೈ ಮುಖಂಡರು!

Webdunia
ಮಂಗಳವಾರ, 6 ನವೆಂಬರ್ 2018 (13:54 IST)
ಸಚಿವ ಹೆಚ್.ಡಿ.ರೇವಣ್ಣ ಸಾಯುವತನಕ ಶಾಸಕ ಎಂದು ಹಾಡಿ ಹೊಗಳಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಹೇಳಿಕೆಗೆ ಸ್ವಪಕ್ಷದವರಿಂದಲೇ ಟೀಕೆಗಳು ಕೇಳಿಬರುತ್ತಿವೆ.

ಶ್ರವಣಬೆಳಗೊಳದಲ್ಲಿ ನಡೆದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಗೆ ರಾಷ್ಟ್ರೀಯ ಮಹಾವೀರ ಶಾಂತಿ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವೆ ಜಯಮಾಲಾ, ಹಾಸನ ಜಿಲ್ಲೆಯ ಶುಚಿತ್ವ ನೋಡಿದರೆ ಸಚಿವ ರೇವಣ್ಣ ಅವರ ಕೆಲಸ ಗೊತ್ತಾಗುತ್ತದೆ. ಅವರು ಸಾಯುವತನಕ ಶಾಸಕರಾಗಿ ಇರಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಅದು ಸ್ವಪಕ್ಷದವರಿಂದಲೇ ವಿವಾದಕ್ಕೆ ಕಾರಣವಾಗಿದೆ.

ಹಾಸನ ಜಿಲ್ಲಾ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎ. ಮಂಜು ಮಾತನಾಡಿದ್ದು, ಅನುಭವವಿಲ್ಲದವರಿಗೆ ಅಧಿಕಾರ ಸಿಕ್ಕರೆ ಹೀಗೆ ಆಗುತ್ತದೆ. ಓಲೈಕೆ ಮಾಡುವುದಕ್ಕಾಗಿ ಜಯಮಾಲಾ ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸಾಯುವ ತನಕ ನಟಿಯಾಗುತ್ತೇನೆ ಎಂದು ಜಯಮಾಲಾ ಅಂದುಕೊಂಡಿದ್ದರು. ಆದರೆ ಜನರು ಅವರ ಸಿನಿಮಾ ನೋಡುವುದಿಲ್ಲ ಎಂಬ ಸತ್ಯ ಅರಿವಾದಾಗ ರಾಜಕೀಯಕ್ಕೆ ಬಂದಿದ್ದಾರೆ. ಸಿನಿಮಾದಲ್ಲಿ ದುಡ್ಡು ಮಾಡಿರುವ ಅವರು, ರಾಜಕೀಯದಲ್ಲಿ ಓಲೈಕೆಯ ರಾಜಕಾರಣ ಮಾಡುತ್ತಿದ್ದಾರೆ. ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments