Webdunia - Bharat's app for daily news and videos

Install App

ರಾಹುಲ್ ಗಾಂಧಿ ಭಾಷಣಕ್ಕೆ ಮೂಲ ಕಾಂಗ್ರೆಸ್ಸಿಗರ ಮುನಿಸು

Webdunia
ಭಾನುವಾರ, 25 ಮಾರ್ಚ್ 2018 (10:14 IST)
ಮೈಸೂರು: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ ವಿಷಯವೊಂದರ ಬಗ್ಗೆ ಮೂಲ ಕಾಂಗ್ರೆಸ್ಸಿಗರು ಸಿಟ್ಟಾಗಿದ್ದಾರೆ.

ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಜೆಡಿಎಸ್ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಎಂದರೆ ಜನತಾ ದಳ ಸೆಕ್ಯುಲರ್ ಅಲ್ಲ, ಜನತಾದಳ ಸಂಘ ಪರಿವಾರ ಎಂದು ಟೀಕಿಸಿದ್ದರು. ಕಳೆದ ಬಾರಿ ಕರಾವಳಿ ಪ್ರವಾಸ ಸಂದರ್ಭದಲ್ಲಿಯೂ ಜೆಡಿಎಸ್ ಎಂದರೆ ಬಿಜೆಪಿಯ ಬಿ ಟೀಂ ಎಂದು ಜರೆದಿದ್ದರು.

ಇದು ಮೂಲ ಕಾಂಗ್ರೆಸಿಗರ ಮುನಿಸಿಗೆ ಕಾರಣವಾಗಿದೆ. ಒಂದು ವೇಳೆ ಚುನಾವಣೆಯಲ್ಲಿ ಯಾರಿಗೂ ಬಹುಮತ ಬಾರದೇ ಅತಂತ್ರ ಸ್ಥಿತಿ ಬಂದರೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸಮಾಲೋಚಿಸಬೇಕಾಗುತ್ತದೆ. ಆದರೆ ಇದೀಗ ಜೆಡಿಎಸ್ ಬಗ್ಗೆ ಈ ರೀತಿ ಮಾತನಾಡಿ ಸಂಬಂಧ ಹಾಳು ಮಾಡಿಕೊಂಡರೆ ಮುಂದೆ ಮೈತ್ರಿ ಮಾಡಿಕೊಳ್ಳಬಹುದಾದ ಸಂದರ್ಭ ಬಂದರೆ ಕಷ್ಟವಾಗಬಹುದು ಎಂದು ಮೂಲ ಕಾಂಗ್ರೆಸ್ಸಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ರಾಹುಲ್ ಗಾಂಧಿಯವರ ಈ ಮಾತಿನ ಹಿಂದೆ ಸಿಎಂ ಸಿದ್ದರಾಮಯ್ಯ ಮತ್ತು ಟೀಂ ಕೈವಾಡವಿದೆ ಎಂಬ ಗುಸು ಗುಸು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments