Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯರ ರಾಜೀನಾಮೆ ಅಂಗೀಕರಿಸದಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಿದ ಕಾಂಗ್ರೆಸ್ ನಾಯಕರು

ಸಿದ್ದರಾಮಯ್ಯರ ರಾಜೀನಾಮೆ ಅಂಗೀಕರಿಸದಂತೆ ಹೈಕಮಾಂಡ್ ಮೇಲೆ ಒತ್ತಡ  ಹೇರಿದ ಕಾಂಗ್ರೆಸ್ ನಾಯಕರು
ಬೆಂಗಳೂರು , ಬುಧವಾರ, 25 ಡಿಸೆಂಬರ್ 2019 (10:47 IST)
ಬೆಂಗಳೂರು : ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರ ರಾಜೀನಾಮೆ ಅಂಗೀಕರಿಸದಂತೆ ಹೈಕಮಾಂಡ್ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಸಿದ್ದರಾಮಯ್ಯ ಪರ ಕೃಷ್ಣಭೈರೇಗೌಡ, ರಿಜ್ವಾನ್ ಅರ್ಷದ್, ಸೇರಿದಂತೆ ರಾಜ್ಯದ ಹಲವು ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದು, ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ವಾಪಾಸ್ ಪಡೀತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ನಾಯಕತ್ವದ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.


ಬೈಎಲೆಕ್ಷನ್ ನಲ್ಲಿ 2 ಸೀಟು ಬರಲು ಸಿದ್ದರಾಮಯ್ಯ ಕಾರಣ. ಅವರ ನಾಯಕತ್ವ ಇಲ್ಲದಿದ್ರೆ ಮುಂದೆ ತೊಂದರೆ ಆಗಲಿದೆ. ಸಿಎಲ್ ಪಿ ನಾಯಕರಾಗಿ ಸಿದ್ದರಾಮಯ್ಯರನ್ನೇ ಮುಂದುವರಿಸಿ ಎಂದು ಕೆ.ಸಿ.ವೇಣುಗೋಪಾಲ್ ಜತೆ ರಾಜ್ಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಪ್ರಧಾನಿ ವಾಜಪೇಯಿ ಜಯಂತಿ ಹಿನ್ನಲೆ; ಸಮಾಧಿಗೆ ಪುಷ್ಪನಮನ ಸಲ್ಲಿಸಿದ ರಾಜಕೀಯ ಗಣ್ಯರು