Webdunia - Bharat's app for daily news and videos

Install App

ಯದುವೀರ್ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Krishnaveni K
ಭಾನುವಾರ, 21 ಏಪ್ರಿಲ್ 2024 (13:44 IST)
ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಒಡೆಯರ್ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
 

ಯದುವೀರ್ ಒಡೆಯರ್ ಈ ಬಾರಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ರಾಜಕೀಯದಲ್ಲಿ ಅವರಿಗೆ ಅನುಭವ ಹೊಸದು. ಹಾಗಿದ್ದರೂ ತಮ್ಮ ಕ್ಷೇತ್ರದಲ್ಲಿ ಓಡಾಡುತ್ತಾ ಜನರೊಂದಿಗೆ ಬೆರೆತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ನಡುವೆ ಕಾಂಗ್ರೆಸ್ ಅವರ ವಿರುದ್ಧ ಹಣ, ಸೀರೆ, ಪುಸ್ತಕ ಇತ್ಯಾದಿಗಳನ್ನು ಹಂಚಿ, ಆಮಿಷವೊಡ್ಡಿದ ಆರೋಪ ಹೊರಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಯದುವೀರ್ ಒಡೆಯರ್ ಸೋಷಿಯಲ್ ಮೀಡಿಯಾದಲ್ಲಿ ಪ್ರಭಾವಿತರಾಗಿರುವ ಕೆಲವು ವ್ಯಕ್ತಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಯದುವೀರ್ ಸೋಷಿಯಲ್ ಮೀಡಿಯಾ ಪ್ರಭಾವಿಗಳಿಗೆ ಹಣ, ಸೀರೆ, ಪುಸ್ತಕ, ಪೆನ್ನು ಹಂಚಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ತಮ್ಮ ಪರವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಲು ಯದುವೀರ್ ಈ ರೀತಿ ಅಮಿಷವೊಡ್ಡಿರುವುದು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿದೆ. ಇದಕ್ಕೆ ಪುರಾವೆಯಾಗಿ ಫೋಟೋಗಳು ನಮ್ಮ ಬಳಿಯಿದೆ. ಹೀಗಾಗಿ ಯದುವೀರ್ ಒಡೆಯರ್ ವಿರುದ್ಧ ತಕ್ಕ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments