ಶಿಗ್ಗಾಂವಿಯಲ್ಲಿ ಬಸವರಾಜ್ ಬೊಮ್ಮಾಯಿ ಪುತ್ರನಿಗಾಗಿ ಕಾಂಗ್ರೆಸ್ ಅಡ್ಜಸ್ಟ್ ಮೆಂಟ್

Krishnaveni K
ಶನಿವಾರ, 26 ಅಕ್ಟೋಬರ್ 2024 (08:30 IST)
Photo Credit: X
ಶಿಗ್ಗಾಂವಿ: ಮುಂಬರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿರುವ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರನಿಗಾಗಿ ಕಾಂಗ್ರೆಸ್ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡಿತೇ ಎಂಬ ಅನುಮಾನ ಮೂಡಿದೆ.

ಶಿಗ್ಗಾಂವಿಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ ನಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿ ಮೊದಲು ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿತು. ಬಸವರಾಜ ಬೊಮ್ಮಾಯಿಂದ ತೆರವಾದ ಸ್ಥಾನಕ್ಕೆ ಪುತ್ರನನ್ನೇ ಕಣಕ್ಕಿಳಿಸಲಾಯಿತು.

ಇತ್ತ ಬೊಮ್ಮಾಯಿ ಪುತ್ರನನ್ನು ಕಣಕ್ಕಿಳಿಸುತ್ತಿದ್ದಂತೇ ಕಾಂಗ್ರೆಸ್ ಮುಸ್ಲಿಂ ಸಮುದಾಯದ ಯಾಸಿರ್ ಪಠಾಣ್ ರನ್ನು ಕಣಕ್ಕಿಳಿಸಿದೆ. ಆದರೆ ಯಾಸಿರ್ ಸ್ಥಳೀಯರಲ್ಲ. ಅಲ್ಲದೆ ಅವರು ಪರಿಚಿತರೂ ಅಲ್ಲ. ಬಸವರಾಜ ಬೊಮ್ಮಾಯಿ ಪುತ್ರನ ವಿರುದ್ಧ ಒಬ್ಬ ದುರ್ಬಲ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ ಎಂದೇ ಅಂದುಕೊಳ್ಳಬಹುದು.

ಇದನ್ನು ಗಮನಿಸಿರುವ ಜನರು, ಕಾಂಗ್ರೆಸ್ ಇಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿತೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಯಾಕೆಂದರೆ ಯಾಸಿರ್ ನಾಮಪತ್ರ ಸಲ್ಲಿಕೆ ವೇಳೆಯೂ ಯಾವೊಬ್ಬ ಕಾಂಗ್ರೆಸ್ ನಾಯಕರೂ ಜೊತೆಗಿರಲಿಲ್ಲ. ಹೀಗಾಗಿ ಶಿಗ್ಗಾಂವಿಯನ್ನು ಬೇಕೆಂದೇ ಕಡೆಗಣಿಸಿ ಬೊಮ್ಮಾಯಿ ಪುತ್ರನಿಗೆ ಕಾಂಗ್ರೆಸ್ ಅನುಕೂಲ ಮಾಡಿಕೊಡುತ್ತಿದೆಯೇ ಎಂಬ ಅನುಮಾನ ಮೂಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments