ಮುಗಿಯದ ಕಾಂಗ್ರೆಸ್ ಸಚಿವರ ಗುದ್ದಾಟ!

Webdunia
ಶುಕ್ರವಾರ, 30 ನವೆಂಬರ್ 2018 (18:30 IST)
ಅವರಿಬ್ಬರು ಒಂದೇ ಪಕ್ಷದ ಪ್ರಮುಖ ನಾಯಕರು. ಸಚಿವರೂ ಹೌದು. ಆದರೆ ಅವರಿಬ್ಬರ ನಡುವೆ ಆರಂಭಗೊಂಡಿರುವ ಶೀಥಲ ಸಮರ ಇದುವರೆಗೂ ಕೊನೆಯಾಗಿಲ್ಲ. ಪರಸ್ಪರ ಆರೋಪ ಪ್ರತ್ಯಾರೋಪಗಳು ಸದ್ದಿಲ್ಲದೇ ಮುಂದುವರಿದಿವೆ.

ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ.  ಕೆಲವು ಶಾಸಕರು ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಮುಂಬೈಗೆ ತೆರಳುತ್ತಾರೆ ಎಂಬ ವರದಿಗಳ ಹಿಂದೆ ಪ್ರಭಾವಿ ಸಚಿವರ ಕೈವಾಡವಿದೆ ಎಂದು ಸಚಿವ ರಮೇಶ್ಜಾರಕಿಹೊಳಿ ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ತಾವು ಸೇರಿದಂತೆ ಕೆಲವು ಶಾಸಕರಲ್ಲಿ ಗೊಂದಲ, ಸಮಸ್ಯೆಗಳು ಇದ್ದದ್ದು ನಿಜ. ಸಮಸ್ಯೆಗಳನ್ನೆಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗೆಹರಿಸಿದ್ದಾರೆ. ಈಗ ಯಾವುದೇ ಸಮಸ್ಯೆಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮದೇ ಪಕ್ಷದ ನಾಯಕರೊಬ್ಬರು ತಮ್ಮ ಹೆಸರನ್ನು ಕೆಡಿಸಲು ಪದೇ ಪದೇ ರೀತಿ ವರದಿಗಳು ಬರುವಂತೆ ನೋಡಿಕೊಳ್ಳುತ್ತಿದ್ದಾರೆ. ಮಾಧ್ಯಮದವರು ಇಂಥ ವರದಿಗಳನ್ನು ಮಾಡುವಾಗ ಎಚ್ಚರ ವಹಿಸಬೇಕು ಎಂದು ಅವರು ಹೇಳಿದರು.
ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕೆಲ ಶಾಸಕರು ಮುಂಬೈಗೆ ತೆರಳಲಿದ್ದಾರೆ ಎಂಬ ವರದಿಗಳು ರಾಜಕೀಯ ಷಡ್ಯಂತ್ರ ಎಂದು ದೂರಿದ ಅವರು, ನಾವ್ಯಾರೂ ಮುಂಬೈಗೆ ಹೋಗುತ್ತಿಲ್ಲ. ನಾನಂತೂ ಕಳೆದ 2 ದಿನಗಳಿಂದ ಬೆಂಗಳೂರಿಲ್ಲೇ ಇದ್ದೇನೆ ಎಂದು ಸ್ಪಷ್ಟಪಡಿಸಿದರು.

ತಮ್ಮ ವಿರುದ್ಧ ಡ್ಯಾಮೇಜ್ ಆಗುವ ರೀತಿಯಲ್ಲಿ ಬರುತ್ತಿರುವ ವರದಿಗಳ ಹಿಂದೆ ಪ್ರಭಾವಿ ಸಚಿವರ ಕೈವಾಡವೂ ಇದೆ ಎಂದು ಅವರು ಕಿಡಿಕಾರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಮೆಟ್ರೋದಲ್ಲಿ ಸಾರ್ವಜನಿಕವಾಗಿಯೇ ಯುವ ಜೋಡಿಯ ರೊಮ್ಯಾನ್ಸ್: ನೆಟ್ಟಿಗರ ಆಕ್ರೋಶ Video

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಹಣ ಕೊಡಲಿಲ್ಲವೆಂದು ಹೆಂಡತಿ ಮಗಳ ಎದುರೇ ವ್ಯಕ್ತಿಗೆ ಹೀಗೆ ಮಾಡೋದಾ.. ತೃತೀಯ ಲಿಂಗಿಗಳ ದಾಳಿಗೆ ಕೊನೆ ಯಾವಾಗ Video

ಮುಂದಿನ ಸುದ್ದಿ
Show comments