Select Your Language

Notifications

webdunia
webdunia
webdunia
webdunia

ಶೋಕಾಚರಣೆ ಉಲ್ಲಂಘಿಸಿ ಆಡಳಿತರೂಢ ಪಕ್ಷದ ಶಾಸಕನಿಂದಲೇ ಚುನಾವಣೆ ಪ್ರಚಾರ!

ಶೋಕಾಚರಣೆ ಉಲ್ಲಂಘಿಸಿ ಆಡಳಿತರೂಢ ಪಕ್ಷದ ಶಾಸಕನಿಂದಲೇ ಚುನಾವಣೆ ಪ್ರಚಾರ!
ಬೆಳಗಾವಿ , ಗುರುವಾರ, 5 ಜನವರಿ 2017 (07:09 IST)
ಸಹಕಾರಿ ಮತ್ತು ಸಕ್ಕರೆ ಸಚಿವರಾದ ಎಚ್.ಸಿ.ಮಹದೇವಪ್ರಸಾದ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಆದರೆ, ಬೆಳಗಾವಿ ಜಿಲ್ಲೆಯ ಸದಲಗಾ ಕ್ಷೇತ್ರದ ಶಾಸಕ ಗಣೇಶ್ ಹುಕ್ಕೆರಿ ಇದನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರ ಮಾಡಿದ್ದಾರೆ.
 
ನಿಪ್ಪಾಣಿಯ ಎಪಿಎಂಸಿ ಚುನಾವಣೆಗೆ ಸ್ಪರ್ಧಿಸಿರುವ ನಾಲ್ಕು ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡು ಶೋಕಾಚರಣೆ ಉಲ್ಲಂಘನೆ ಮಾಡಿದ್ದು, ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಸಚಿವ ಎಚ್.ಸಿ.ಮಹದೇವಪ್ರಸಾದ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಶೋಕಾಚರಣೆ ಘೋಷಿಸಿದ್ದು, ಆಡಳಿತರೂಢ ಪಕ್ಷದ ಶಾಸಕರೇ ಉಲ್ಲಂಘನೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
 
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿರುವ ಖಾಸಗಿ ರೆಸಾರ್ಟ‌್‌ನಲ್ಲಿ ತಂಗಿದ್ದ ಸಹಕಾರ-ಸಕ್ಕರೆ ಸಚಿವ ಸಚಿವ ಎಚ್.ಸಿ.ಮಹದೇವಪ್ರಸಾದ್ ಅವರು, ಮಂಗಳವಾರ ಮುಂಜಾನೆ ಹೃದಯಘಾತದಿಂದ ವಿಧಿವಶರಾಗಿದ್ದರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನೋಟು ನಿಷೇಧ: ಆರ್‌ಬಿಐ ಎದುರು ಮಹಿಳೆ ನಗ್ನಳಾಗಿ ಪ್ರತಿಭಟನೆ