ಕಾಂಗ್ರೆಸ್ ಶಾಸಕ ಮೊಯ್ದಿನ್ ಬಾವಾ ಅವರು ಕೆಎಐಡಿಬಿ ಅಧಿಕಾರಿಗಳ ಜೊತೆ ಅನುಚಿತ ವರ್ತನೆ ತೋರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜನೆವರಿ 30ರಂದು ಬೈಕಂಪಾಡಿ-ಜೋಕಟ್ಟೆ ರಸ್ತೆ ದುರಸ್ತಿ ಕಾಮಗಾರಿ ಕುರಿತು ಮಾಹಿತಿ ಪಡೆಯಲು ಕೆಎಐಡಿಬಿ ಕಚೇರಿಗೆ ಆಗಮಿಸಿದ್ದ ಶಾಸಕ ಮೊಯ್ದಿನ್ ಬಾವಾ, ಎದ್ದು ನಿಂತುಕೊಂಡೆ ಮಾತನಾಡುವಂತೆ ಕೆಎಐಡಿಬಿ ಅಧಿಕಾರಿ ಪ್ರಕಾಶ್ ಅವರಿಗೆ ತಾಕೀತು ಮಾಡಿದ್ದಾರೆ. ಜೊತೆಗೆ ಏಕವಚನದಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಮೊಯ್ದಿನ್ ಬಾವಾ ಮಂಗಳೂರು ಉತ್ತರ ಕೇತ್ರದ ಶಾಸಕರಾಗಿದ್ದಾರೆ.
ರಾಜ್ಯದಲ್ಲಿ ಸರಕಾರಿ ಅಧಿಕಾರಿಗಳ ಮೇಲೆ ರಾಜಕಾರಣಿಗಳ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಶಾಸಕ ಮೊಯ್ದಿನ್ ಬಾವಾ ಅವರ ವರ್ತನೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ