Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕ ಮುನಿರತ್ನ ವಿರುದ್ಧ ಕಾರ್ಪೋರೇಟರ್‌ ಮಂಜುಳಾರಿಂದ ಗುಂಡಾಗಿರಿ ಆರೋಪ

Webdunia
ಮಂಗಳವಾರ, 31 ಮೇ 2016 (19:30 IST)
ಶಾಸಕ ಮುನಿರತ್ನ  ಬೆಂಬಲಿಗರು ಗುಂಡಾಗಿರಿ ಮಾಡುತ್ತಿದ್ದಾರೆ ಎಂದು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ನಾರಾಯಣ ಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ.
 
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಕಸ ಸುರಿದ ಜಾಗದಲ್ಲೇ ಬೆಂಕಿ ಹಚ್ಚುತ್ತಿದ್ದಾರೆ. ಮುಂದಿನ ತಿಂಗಳ ಸಭೆಯ ಒಳಗೆ ಕಸ ವಿಲೇವಾರಿಯಾಗಬೇಕು. ಇಲ್ಲವಾದರೆ ಇದರ ವಿರುದ್ಧ ಉಗ್ರ ಹೋರಾಟ ಕೈಗೊಳ್ಳುತ್ತೇನೆ ಎಂದು ಶಾಸಕ ಮುನಿರತ್ನ ಬಿಬಿಎಂಪಿ ಕಾರ್ಯವೈಖರಿ ಕುರಿತು ಗರಂ ಆಗಿದ್ದರು. 
 
ವಾರ್ಡ್‌ಗಳಲ್ಲಿ ಫ್ಲೆಕ್ಸ್‌ಗಳ ಹಾವಳಿ ಹೆಚ್ಚಾಗಿದೆ. ಶಾಸಕ ಮುನಿರತ್ನ ಅವರ ಬೆಂಬಲಿಗರು ಗುಂಡಾಗಿರಿ ಮಾಡುತ್ತಿದ್ದಾರೆ. ಈ ಕುರಿತು ಮೇಯರ್ ಮತ್ತು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ. ಆದರೂ, ಅವರು ಯಾವ ರೀತಿಯ ಕ್ರಮವನ್ನು ಕೈಗೊಂಡಿಲ್ಲ. ಸರಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಶಾಸಕರು ಅಡ್ಡಗಾಲು ಹಾಕುತ್ತಿದ್ದಾರೆ. ಕಾಮಗಾರಿ ನಡೆಯುವ ಸ್ಥಳಕ್ಕೆ ಶಾಸಕರ ಬೆಂಬಲಿಗರು ಬಂದು ಗುಂಡಾಗಿರಿ ಮಾಡುತ್ತಾರೆ. ನನ್ನ ವಾರ್ಡ್ ಜನರಿಗಾಗಿ ಜೀವ ಕೊಡಲು ಸಿದ್ದ ಎಂದು ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ನಾರಾಯಣ ಸ್ವಾಮಿ ಘೋಷಿಸಿದ್ದಾರೆ.
 
ಶಾಸಕರ ಬೆಂಬಲಿಗರು ಕಸಕ್ಕೆ ಬೆಂಕಿ ಹಚ್ಚಿ ಅಗ್ನಿಶಾಮಕ ವಾಹನಕ್ಕೆ ಕರೆ ಮಾಡುತ್ತಾರೆ. ಆರೋಪಗಳನ್ನು ಬೇರೆಯವರ ಮೇಲೆ ಹಾಕುತ್ತಾರೆ. ಈ ಕುರಿತು ನಾವು ಸುಮ್ಮನಿರುವುದಿಲ್ಲ ಎಂದು ಕಾರ್ಪೋರೇಟರ್ ಮಂಜುಳಾ ನಾರಾಯಣ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಮುಂದಿನ ಸುದ್ದಿ
Show comments