Webdunia - Bharat's app for daily news and videos

Install App

ನಿಗಮ-ಮಂಡಳಿಗಳಲ್ಲಿ ಶಾಸಕರಿಗೆ ಸ್ಥಾನ: ಜಿ.ಪರಮೇಶ್ವರ್

Webdunia
ಶುಕ್ರವಾರ, 2 ಸೆಪ್ಟಂಬರ್ 2016 (14:00 IST)
ಕಳೆದ ಬಾರಿ ನಿಗಮ ಮಂಡಳಿಗಳಲ್ಲಿ ಶಾಸಕರಿಗೆ ಸ್ಥಾನ ನೀಡಿರಲಿಲ್ಲ. ಆದರೆ, ಈ ಬಾರಿ ಶಾಸಕರಿಗೆ ಮಾಜಿ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಸಚಿವ ಸ್ಥಾನ ತಪ್ಪಿಸಿಕೊಂಡಿರುವ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡುವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿಯೇ ದೆಹಲಿಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಚರ್ಚೆ ನಡೆಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
 
ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮುಖಂಡರಾದ ಕುಮಾರ ಬಂಗಾರಪ್ಪ ಮತ್ತು ಬಿ.ಸಿ. ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡುವಂತೆ ಮನವಿ ಮಾಡಿದ್ದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments