ಉಪಚುನಾವಣೆ ಬೆನ್ನಲ್ಲೇ ಜನರಿಗೆ ಗ್ಯಾರಂಟಿ ಶಾಕ್: ಕಾಂಗ್ರೆಸ್ ಶಾಸಕರ ಮಹತ್ವದ ಹೇಳಿಕೆ

Krishnaveni K
ಮಂಗಳವಾರ, 26 ನವೆಂಬರ್ 2024 (12:16 IST)
Photo Credit: X
ಬೆಂಗಳೂರು: ಉಪಚುನಾವಣೆಯಲ್ಲಿ ಮೂರಕ್ಕೆ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಈಗ ಕಾಂಗ್ರೆಸ್ ಶಾಸಕರೊಬ್ಬರು ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗಳು ಸಿಎಂ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಾಗಿವೆ. ಇದೇ ಕಾರಣಕ್ಕೇ ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಆದರೆ ಗ್ಯಾರಂಟಿಯೇ ಸರ್ಕಾರಕ್ಕೆ ಹೊರೆಯಾಗುತ್ತಿದ್ದು ಕೈ ಶಾಸಕರಿಂದಲೇ ಈ ಬಗ್ಗೆ ಆಗಾಗ ಅಸಮಾಧಾನಗಳು ಕೇಳಿಬರುತ್ತಿರುತ್ತವೆ.

ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲ ಎಂದು ಪಕ್ಷಕ್ಕೆ ಮುಜುಗರ ತಂದಿಟ್ಟಿದ್ದ ಕಾಂಗ್ರೆಸ್ ಶಾಸಕ ಗವಿಯಪ್ಪ ಈಗ ಗ್ಯಾರಂಟಿ ಯೋಜನೆ ಕೈ ಬಿಡುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದು, ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ. ಗ್ಯಾರಂಟಿ ಯೋಜನೆಗಳ ಪೈಕಿ ಕೆಲವನ್ನಾದರೂ ಕೈ ಬಿಡಲು ಸರ್ಕಾರಕ್ಕೆ ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ.

ಗ್ಯಾರಂಟಿಯಿಂದಾಗಿ ಆಶ್ರಯ ಮನೆಗಳು ಬರುತ್ತಿಲ್ಲ. ಹೀಗಾಗಿ ಗ್ಯಾರಂಟಿ ಯೋಜನೆ ಪೈಕಿ ಶಕ್ತಿ ಯೋಜನೆಯನ್ನಾದರೂ ಕೈ ಬಿಡುವಂತೆ ಸಿಎಂಗೆ ಮನವಿ ಮಾಡುವುದಾಗಿ ಗವಿಯಪ್ಪ ಹೇಳಿದ್ದಾರೆ. ಈ ಮೊದಲು ಅನುದಾನ ಬರುತ್ತಿಲ್ಲ ಎಂದು ಹೇಳಿ ವಿವಾದ ಹುಟ್ಟುಹಾಕಿದ್ದ ಗವಿಯಪ್ಪ ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments