ಬೆಂಗಳೂರು: ಕಾಂಗ್ರೆಸ್ ಶಾಸ ವೀರೇಂದ್ರ ಪಪಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಕಂತೆ ಕಂತೆ ಹಣ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ.
ವೀರೇಂದ್ರ ಪಪಿಯವರನ್ನು ಈಗಾಗಲೇ ಬಂಧಿಸಿದ ಇಡಿ ಅಧಿಕಾರಿಗಳು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿರುವ ಇಡಿ ಟ್ರಾನ್ಸಿಟ್ ವಾರಂಟ್ ಮೇಲೆ ಬೆಂಗಳೂರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಇಡಿ ಅಧಿಕಾರಿಗಳಿಗೆ ದಾಳಿ ವೇಳೆ 12 ಕೋಟಿ ರೂ. ನಗದು, 6 ಕೋಟಿ ರೂ. ಮೌಲ್ಯದ ಚಿನ್ನ, 10 ಕೆ.ಜಿ ಬೆಳ್ಳಿ ಸಿಕ್ಕಿದೆ.
ಅಕ್ರಮ ಆನ್ ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಿನ್ನೆಯೇ ಚಿತ್ರದುರ್ಗದ ಶಾಸಕ ವೀರೇಂದ್ರ ಪಪಿ ಮತ್ತು ಇತರೆ 30 ಕಡೆ ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಹಣ, ಚಿನ್ನ,ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.
ವೀರೇಂದ್ರ ಪಪಿ ಮತ್ತು ಸಹೋದರ ಹಲವು ವ್ಯವಹಾರಗಳನ್ನು ಹೊಂದಿದ್ದಾರೆ. ಈ ಪೈಕಿ ಸಹೋದರ ಕೆಸಿ ತಿಪ್ಪೇಸ್ವಾಮಿ ಕಾಲ್ ಸೆಂಟರ್ ಮತ್ತು ಗೇಮಿಂಗ್ ವ್ಯವಹಾರಗಳಿಗೆ ಸಂಬಂಧಿಸಿದ ವ್ಯವಹಾರಗಳೂ ಇವೆ.