Publish Date: Sat, 27 Oct 2018 (19:00 IST)
Updated Date: Sat, 27 Oct 2018 (19:02 IST)
ಕಾಂಗ್ರೆಸ್ ನಾಯಕರ ವಿರುದ್ಧ ಆಧಾರರಹಿತವಾದ ಆರೋಪಗಳನ್ನು ಹಾಗೂ ಟೀಕೆಗಳನ್ನು ಮಾಡಿದರೆ ಜೆಡಿಎಸ್ ನ ಬಂಡವಾಳ ಬಯಲು ಮಾಡುವೆ. ಹೀಗಂತ ಕಾಂಗ್ರೆಸ್ ಶಾಸಕರೊಬ್ಬರು ಎಚ್ಚರಿಕೆ ನೀಡಿದ್ದಾರೆ.
ಜಾತ್ಯಾತೀಯ ಜನತಾದಳದವರು ಕಾಂಗ್ರೆಸ್ ಮುಖಂಡರ ವಿರುದ್ಧ ವಿನಾಕಾರಣ ಆರೋಪ ಮಾಡಿದರೆ ತಕ್ಕ ಪಾಠ ಕಲಿಸುವ ಜತೆಗೆ ಜೆಡಿಎಸ್ ಮುಖಂಡರ ಬಂಡವಾಳ ಬಯಲು ಮಾಡುವೆ ಎಂದು ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ನ ಜನಪರ ಧೋರಣೆ ಮನಗಂಡು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ್ದಾರೆ. ಅದಕ್ಕಾಗಿ ಮತದಾರರನ್ನು ಅಭಿನಂದಿಸಲಾಗುವುದು ಎಂದರು.
ಜೆಡಿಎಸ್ ನಾಯಕರು ವಿನಾಕಾರಣ ಹೇಳಿಕೆ ನೀಡುವುದನ್ನು ಬಿಡಬೇಕೆಂದು ಆಗ್ರಹಿಸಿದರು.