Webdunia - Bharat's app for daily news and videos

Install App

ಅವರಪ್ಪನಿಂದಲೂ ನನ್ನ ಸಂಪರ್ಕಿಸಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದ ಕಾಂಗ್ರೆಸ್ ಶಾಸಕ

Webdunia
ಶನಿವಾರ, 15 ಸೆಪ್ಟಂಬರ್ 2018 (17:54 IST)
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ನಡೆಸಿರುವ ಯತ್ನಕ್ಕೆ ಕಾಂಗ್ರೆಸ್ ಶಾಸಕ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಹಿರಿಯ ಶಾಸಕ  ಶಾಮನೂರು ಶಿವಶಂಕರಪ್ಪ ತಿರುಗೇಟು ನೀಡಿದ್ದು, ಬಿಜೆಪಿ ಅವರೇನಾದರೂ ನಮ್ಮವರಿಗೆ ಕೈ ಹಾಕಿದರೆ ನಾವು ಅವರ ಗುಂಪಿಗೆ ಕೈ ಹಾಕುವ ಮೂಲಕ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ನಾನು ಬಿಜೆಪಿ ಸೇರುತ್ತೇನೆ ಎಂಬುದೆಲ್ಲ ಸುಳ್ಳು. ನನ್ನನ್ನು ಸಂಪರ್ಕಿಸಲು ಅವರಪ್ಪನಿಂದಲೂ ಸಾಧ್ಯವಿಲ್ಲ ಎನ್ನುವ ಮೂಲಕ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರತಿಕ್ರಿಯೆ ನೀಡಿರುವ ಶಾಮನೂರು ಶಿವಶಂಕರಪ್ಪ, ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ. ಹೀಗಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಶಿವಶಂಕರಪ್ಪ, ಜಾರಕಿಹೊಳಿ ಸೇರಿದಂತೆ ಯಾರೂ ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ನಾನು ಮಂತ್ರಿ ಸ್ಥಾನದ ಮೇಲೆ ಡಿಫೆಂಡ್ ಆಗಿಲ್ಲ.

ನಮ್ಮ ಕೈಯಲ್ಲಿರುವ ಕೆಲಸಗಳನ್ನು ಮಾಡುತ್ತೇವೆ. ಮಂತ್ರಿ ಸ್ಥಾನ ಕೊಟ್ಟರೆ ಕೊಡಲಿ ಬಿಟ್ಟರೆ ಬಿಡಲಿ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments