Webdunia - Bharat's app for daily news and videos

Install App

ಸರಕಾರದ ವಿರುದ್ಧ ಸಿಡಿದೆದ್ದ ಕೈ ಶಾಸಕರು?

Webdunia
ಭಾನುವಾರ, 28 ಏಪ್ರಿಲ್ 2019 (17:21 IST)
ರಾಜ್ಯದ ರಾಜಕೀಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸದ್ಯದ ರಾಜಕೀಯ ಪರಿಸ್ಥಿತಿಗೆ ಪರಿಹಾರ ಹುಡುಕಬೇಕಿದೆ. ಹೀಗಂತ ಕೈ ಪಾಳೆಯದ ಶಾಸಕರೊಬ್ಬರು ಹಲವು ಶಾಸಕರಿಗೆ ಪತ್ರ ಬರೆಯುವ ಮೂಲಕ ಸಿಡಿದೆದ್ದಿದ್ದಾರೆ.

ಕಾಂಗ್ರೆಸ್ ಶಾಸಕರಿಗೆ ಪತ್ರ ಬರೆದಿದ್ದಾರೆ ಶಾಸಕ ಎಸ್. ಟಿ. ಸೋಮಶೇಖರ್. ಮಂಗಳವಾರ ಶಾಸಕರ ಸಭೆಯನ್ನು ಕರೆದಿದ್ದಾರೆ.
ರಾಜಕೀಯ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಲು ಸಭೆ ಕರೆಯಲಾಗಿದೆ ಎಂದಿದ್ದಾರೆ.

ಈ ಮೂಲಕ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರಿಂದಲೇ ಸಿದ್ಧವಾಗ್ತಿದೆಯಾ ವೇದಿಕೆ? ಎನ್ನುವ ಅನುಮಾನ ಕಾಡಲಾರಂಭಿಸಿದೆ.

ಸಮಾನ ಮನಸ್ಕ ಶಾಸಕರ ಸಭೆ ಕರೆದ ಶಾಸಕ ಎಸ್. ಟಿ. ಸೋಮಶೇಖರ್, ಶಾಸಕರೆಲ್ಲ‌ ಒಂದುಗೂಡಿ ಚರ್ಚೆ ಮಾಡೋಣ ಅಂತ ಆಪ್ತ ಶಾಸಕರಿಗೆ ಪತ್ರ ಬರೆದಿದ್ದಾರೆ.

ಮಂಗಳವಾರ ಬೆಳಗ್ಗೆ ಖಾಸಗಿ ಹೊಟೇಲ್ ನಲ್ಲಿ ಸಭೆ ಕರೆದ ಎಸ್. ಟಿ. ಸೋಮಶೇಖರ್ ನೇತೃತ್ವದ ಸಭೆಯಲ್ಲಿ ಎಲ್ಲ‌ ನಿಗಮ ಮಂಡಳಿಗಳ ಅಧ್ಯಕ್ಷರು, ನಿಗಮ ಮಂಡಳಿಗಳಿಂದ ವಂಚಿತರಾದ ಶಾಸಕರು, ಅತೃಪ್ತರು ಸಭೆಗೆ ಹಾಜರಾಗೋ ಸಾಧ್ಯತೆ ಕಂಡುಬರುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments